ಬರಾಬಂಕಿ: ಉತ್ತರಪ್ರದೇಶದ ಬರಬಂಕಿ ಬಿಲ್ಲೆಯ ಪೊಲೀಸ್ ಠಾಣೆಯ ಇಬ್ಬರು ಪೊಲೀಸರು ಠಾಣೆಯೊಳಗೇ ಅಂಗನವಾಡಿ ಕಾರ್ಯಕರ್ತೆಗೆ ಬೆಂಕಿ ಹಚ್ಚಿದ್ದರ ಪರಿಣಾಮವಾಗಿ ತೀವ್ರವಾಗಿ ಗಾಯಗೊಂಡು ಮಹಿಳೆ ಸಾವನ್ನಪ್ಪಿದ್ದಾರೆ.
ವರದಿಗಳ ಪ್ರಕಾರ ತನ್ನ ಗಂಡನನ್ನು ಪೊಲೀಸರಿಂದ ಬಿಡಿಸಿಕೊಂಡು ಬರಲು ಮಹಿಳೆ ಪೊಲೀಸ್ ಠಾಣೆಗೆ ತೆರಳಿದ್ದಳಂತೆ. ಪೊಲೀಸರು ವಿಚಾರಣೆಗೆಂದು ಮಹಿಳೆಯ ಗಂಡನನ್ನು ಠಾಣೆಯಲ್ಲಿ ಇಟ್ಟುಕೊಂಡಿದ್ದರು ಎಂದು ತಿಳಿದುಬಂದಿದೆ. ಪೊಲೀಸರು ಬಿಡುಗಡೆಗೆ ಲಂಚ ಕೇಳಿದ್ದಕ್ಕೆ ಕೊಡಲು ನಿರಾಕರಿಸಿದ ಮಹಿಳೆಗೆ ಬೆಂಕಿ ಹಚ್ಚಿದ್ದಾರೆ ಎಂದು ತಿಳಿದುಬಂದಿದೆ.
ಇದರಿಂದ ಆಕ್ರೋಶಗೊಂಡಿರುವ ಕುಟುಂಬ ನ್ಯಾಯಕ್ಕಾಗಿ ಮೊರೆಯಿಟ್ಟಿದ್ದು, ತಪ್ಪಿತಸ್ಥರನ್ನು ಶಿಕ್ಷಿಸುವಂತೆ ಆಗ್ರಹಿಸಿದೆ.
"ನಮಗೆ ನ್ಯಾಯ ಬೇಕು. ತಪ್ಪಿತಸ್ಥರಿಗೆ ಶಿಕ್ಷೆಯಾದರಷ್ಟೇ ನಮ್ಮ ತಾಯಿಯ ಆತ್ಮಕ್ಕೆ ಶಾಂತಿ ಸಿಗುತ್ತದೆ" ಎಂದು ಮೃತ ಮಹಿಳೆಯ ಮಗ ತಿಳಿಸಿದ್ದಾನೆ.
Advertisement