ಬೆಂಗಳೂರು: ಲೋಕಾಯುಕ್ತ ಸಂಸ್ಥೆಯಲ್ಲಿ ಒಳಒಪ್ಪಂದ ವ್ಯವಹಾರಗಳು ನಡೆಯುತ್ತಿದ್ದು, ಸಂಸ್ಥೆಯಲ್ಲಿನ ಲೋಪಗಳು ಬೆಳಕಿಗೆ ಬಂದಿವೆ. ಈಗಲಾದರೂ ಸಂಸ್ಥೆ ಕಣ್ಣು ತೆರೆಯದಿದ್ದರೆ ಹೇಗೆ ಎಂದು ಸಂಸ್ಥೆ ವಿರುದ್ಧ ಹೈಕೋರ್ಟ್ ಕಿಡಿಕಾರಿದೆ. ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿ 18 ತಿಂಗಳಾದರೂ ತನಿಖೆ ಪೂರ್ಣಗೊಳಿಸದ ಹಿನ್ನೆಲೆಯಲ್ಲಿ ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಡಾ. ವಿ.ಎಲ್. ನಂದೀಶ್ ಹೈಕೋರ್ಟ್ನಲ್ಲಿ ಅರ್ಜಿ ದಾಖಲಿಸಿದ್ದರು. ಈ ಕುರಿತು ಬುಧವಾರ ಅರ್ಜಿ ವಿಚಾರಣೆ ನಡೆಸಿದ ನ್ಯಾ.ವೇಣುಗೋಪಾಲಗೌಡ ಅವರಿದ್ದ ಏಕಸದಸ್ಯ ಪೀಠ, ಲೋಕಾಯುಕ್ತ ಸಂಸ್ಥೆಯಿಂದ ಸಮಾಜಕ್ಕೆ ಒಳ್ಳೆಯದಾಗಬೇಕು. ಅದನ್ನೇ ಸಮಾಜ ಕೂಡ ಬಯಸುತ್ತದೆ. ಈ ಕಾರಣಕ್ಕಾಗಿ ಮೊದಲು ಸಾರ್ವಜನಿಕರಿಗೆ ಪ್ರಾಮಾಣಿಕವಾಗಿರುವಂತೆ ಬದಟಛಿತೆಯನ್ನು ಲೋಕಾ ಸಂಸ್ಥೆ ಪ್ರದರ್ಶಿಸಬೇಕು ಎಂದು ಹೈಕೋರ್ಟ್ `ಲೋಕ'ಕ್ಕೇ ಬೋಧನೆ ಮಾಡಿದೆ.
ಹೈಕೋರ್ಟ್ ಹೇಳಿದ್ದು...
Advertisement