ಬೆಂಗಳೂರು/ವಿಧಾನಸಭೆ: ವಿವಾದಿತ ಲೋಕಾಯುಕ್ತ ತಿದ್ದುಪಡಿ ವಿಧೇಯಕವನ್ನು ರಾಜ್ಯ ಸರ್ಕಾರ ಶುಕ್ರವಾರ ವಿಧಾನಸಭೆಯಲ್ಲಿ ಮಂಡಿಸಿದೆ.
ಇಂದು ವಿಧಾನಸಭೆಯಲ್ಲಿ ಕಾನೂನು ಮತ್ತು ಸಂಸದೀಯ ಸಚಿವ ಟಿ.ಬಿ.ಜಯಚಂದ್ರ ಅವರು ಕರ್ನಾಟಕ ಲೋಕಾಯುಕ್ತ ತಿದ್ದುಪಡಿ ವಿಧೇಯಕವನ್ನು ಮಂಡಿಸಿದರು.
ಪ್ರತಿಪಕ್ಷಗಳ ವಿರೋಧದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ವಿರುದ್ಧ ಕೇಸ್ ದಾಖಲಿಸಲು ಸದನದ ಅನುಮತಿ ಪಡೆಯುವ ಹಾಗೂ ಶಾಸಕರ ಮೇಲೆ ಕೇಸ್ ದಾಖಲಿಸಲು ಸ್ಪೀಕರ್ ಹಾಗೂ ಪರಿಷತ್ ಸಭಾಪತಿಗಳ ಅನುಮತಿ ಪಡೆಯಬೇಕು ಎಂಬ ಪ್ರಸ್ತಾಪವನ್ನು ಕೈ ಬಿಡಲಾಗಿದೆ.
ಹಾಲಿ ಲೋಕಾಯುಕ್ತ ನ್ಯಾಯಮೂರ್ತಿ ವೈ.ಭಾಸ್ಕರ್ ರಾವ್ ಅವರ ವಿರುದ್ಧ ವ್ಯಕ್ತವಾಗಿರುವ ಭ್ರಷ್ಟಾಚಾರ ಪ್ರಕರಣದ ಹಿನ್ನೆಲೆಯಲ್ಲಿ ಲೋಕಾಯುಕ್ತರ ಪದಚ್ಯುತಿಗೆ ಕಾನೂನು ತಿದ್ದುಪಡಿ ಮಾಡುವಂತೆ ಪ್ರತಿಪಕ್ಷಗಳು ಪಟ್ಟು ಹಿಡಿದಿದ್ದವು. ಆದರೆ ಸರ್ಕಾರ ಸಮಗ್ರ ಲೋಕಾಯುಕ್ತ ಕಾಯ್ದೆಗೆ ತಿದ್ದುಪಡಿ ತಂದಿದ್ದು, ಆದನ್ನು ಇಂದು ವಿಧಾನಸಭೆಯಲ್ಲಿ ಮಂಡಿಸಿದೆ.
ಸರ್ಕಾರ ಮಂಡಿಸಿರುವ ಸಮಗ್ರ ಲೋಕಾಯುಕ್ತ ತಿದ್ದುಪಡಿಯಲ್ಲಿ ಕಾಯ್ದೆಯಲ್ಲಿ ಕೆಲವು ವಿಚಾರಗಳಿದ್ದು, ಅದಕ್ಕೆ ಪ್ರತಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ.
ವಿಧೇಯಕದಲ್ಲಿದ್ದ ವಿವಾದಾತ್ಮಕ ವಿಚಾರಗಳು
Advertisement