ಅಬ್ದುಲ್ ಕಲಾಂ ಅಂತ್ಯ ಸಂಸ್ಕಾರಕ್ಕೆ ಸಿದ್ದು, ರಾಹುಲ್ ಗಾಂಧಿ

ಮಾಜಿ ರಾಷ್ಟ್ರಪತಿ ಭಾರತ ರತ್ನ ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಅಂತ್ಯ ಸಂಸ್ಕಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಪಾಲ್ಗೊಳ್ಳುತ್ತಿದ್ದಾರೆ.
ರಾಮೇಶ್ವರಕ್ಕೆ ಆಗಮಿಸಿದ ಕಲಾಂ ಪಾರ್ಥೀವ ಶರೀರ
ರಾಮೇಶ್ವರಕ್ಕೆ ಆಗಮಿಸಿದ ಕಲಾಂ ಪಾರ್ಥೀವ ಶರೀರ
Updated on

ಬೆಂಗಳೂರು: ಮಾಜಿ ರಾಷ್ಟ್ರಪತಿ ಭಾರತ ರತ್ನ ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಅಂತ್ಯ ಸಂಸ್ಕಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ  ಅವರು ಪಾಲ್ಗೊಳ್ಳುತ್ತಿದ್ದಾರೆ.

ಮುಖ್ಯಮಂತ್ರಿಯವರು ಗುರುವಾರ ಮಧುರೈ ಹಾಗೂ ರಾಮನಾಥಪುರಂ ಮಾರ್ಗವಾಗಿ ರಾಮೇಶ್ವರಕ್ಕೆ ತೆರಳಿದ್ದಾರೆ. ಇದೇ ವೇಳೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಮತ್ತು ಪಕ್ಷದ  ಮುಖಂಡ ಗುಲಾಂ ನಬಿ ಅಜಾದ್ ಅವರೂ ಕೂಡ ರಾಮೇಶ್ವರ ತಲುಪಿದ್ದು ಮೂವರು ನಾಯಕರು ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಅವರ ಅಂತಿಮ ದರ್ಶನ ಪಡೆಯಲಿದ್ದಾರೆ.

ನಿನ್ನೆಯಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಬ್ದುಲ್ ಕಲಾಂ ಅವರ ಅಂತಿಮ ವಿಧಿವಿಧಾನದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸರ್ಕಾರದ ಅಧಿಕೃತ ಪ್ರಕಟಣೆ ತಿಳಿಸಿತ್ತು. ಅಂತ್ಯಸಂಸ್ಕಾರ  ದಲ್ಲಿ ಪಾಲ್ಗೊಂಡ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಧ್ಯಾಹ್ನ ಕರ್ನಾಟಕ ವಾಪಸಾಗಿ ವಿಧಾನಮಂಡಲದ ಅಧಿವೇಶನಕ್ಕೆ ಹಾಜರಾಗಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com