ಪ್ರತಿಪಕ್ಷಗಳ ರಾಜಕೀಯ: ಪರಂ ಟೀಕೆ

ಬೆಳಗಾವಿ ಅಧಿವೇಶನ ಸಂದರ್ಭದಲ್ಲಿ ಕಬ್ಬು ಬೆಳೆಗಾರರ ಸಮಸ್ಯೆಯನ್ನು ಮುಂದಿಟ್ಟು ಕೊಂಡು ಪ್ರತಿಪಕ್ಷಗಳು ರಾಜಕಾರಣ ನಡೆಸುತ್ತವೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ. ಜಿ.ಪರಮೇಶ್ವರ ಅಸಮಾಧಾನ ವ್ಯಕ್ತಪಡಿಸಿದರು...
ಕೆಪಿಸಿಸಿ ಅಧ್ಯಕ್ಷ ಡಾ. ಜಿ.ಪರಮೇಶ್ವರ
ಕೆಪಿಸಿಸಿ ಅಧ್ಯಕ್ಷ ಡಾ. ಜಿ.ಪರಮೇಶ್ವರ
Updated on

ಬೆಂಗಳೂರು: ಬೆಳಗಾವಿ ಅಧಿವೇಶನ ಸಂದರ್ಭದಲ್ಲಿ ಕಬ್ಬು ಬೆಳೆಗಾರರ ಸಮಸ್ಯೆಯನ್ನು ಮುಂದಿಟ್ಟು ಕೊಂಡು ಪ್ರತಿಪಕ್ಷಗಳು ರಾಜಕಾರಣ ನಡೆಸುತ್ತವೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ. ಜಿ.ಪರಮೇಶ್ವರ ಅಸಮಾಧಾನ ವ್ಯಕ್ತಪಡಿಸಿದರು.

ಕಬ್ಬು ಬೆಳೆಗಾರರಿಗೆ ಇಡೀ ದೇಶದಲ್ಲೇ ಹೆಚ್ಚು ಪ್ರೊತ್ಸಾಹ ಧನ ನೀಡುತ್ತಿರುವುದು ಕರ್ನಾಟಕ. ಕೆಲವು ತಾಂತ್ರಿಕ ಕಾರಣಗಳಿಂದ ಬಾಕಿ ಹಣ ನೀಡುವುದಕ್ಕೆ ಸಾಧ್ಯವಾಗಿಲ್ಲ. ಈ ಸಮಸ್ಯೆಯನ್ನು ಸರ್ಕಾರ ಆದಷ್ಟುಬೇಗ ಪರಿಹರಿಸುತ್ತದೆ. ಆದರೆ, ಇದನ್ನೇ ನೆಪವಾಗಿಟ್ಟುಕೊಂಡು ಪ್ರತಿಪಕ್ಷಗಳು ಸರ್ಕಾರದ ವಿರುದ್ಧ ರೈತರನ್ನು ಎತ್ತಿ ಕಟ್ಟುವ ಕೆಲಸ ಮಾಡುತ್ತಿವೆ ಎಂದು ಆಪಾದಿಸಿದರು.

ಸರ್ಕಾರ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಟಾರ್ಗೆಟ್ ಮಾಡುತ್ತಿದೆ. ಸಿದ್ಧರಾಮಯ್ಯನವರು ಹಿಂದೆ ಯಡಿಯೂರಪ್ಪನವರ ನೆರವು ಪಡೆದಿದ್ದರು ಎಂದು ಎಚ್.ಡಿ.ಕುಮಾರಸ್ವಾಮಿ ಅವರು ಆರೋಪ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಯಾರು,ಯಾರಿಂದ ನೆರವು ಪಡೆದಿದ್ದರು ಎಂಬುದು ನನಗೆ ಗೊತ್ತಿಲ್ಲ. ಇದರ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಕ್ಕೆ ಇಷ್ಟಪಡುವುದಿಲ್ಲ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com