ಕಬ್ಬಿನ ಬಾಕಿ ಹಣ ಪಾವತಿಗಾಗಿ ಸಕ್ಕರೆ ಕಾರ್ಖಾನೆ ಎದುರು ಧರಣಿ ನಡೆಸುತ್ತಿದ್ದ ಇಬ್ಬರು ರೈತರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಆಳಂದ ತಾಲೂಕಿನಲ್ಲಿ ಗುರುವಾರ ನಡೆದಿದೆ. ಭೂಸನೂರು ಎನ್ಎಸ್ಎಲ್ ಸಕ್ಕರೆ ಕಾರ್ಖಾನೆ ಅಂಗಳದಲ್ಲಿ ಶುರುವಾಗಿರುವ ಧರಣಿಯಲ್ಲೇ ವಿಷ ಕುಡಿದು, ಹಗ್ಗ ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಗುರುವಾರ ನಡೆಯಿತು. ಮಲ್ಲಪ್ಪ ಮೈನಾಳೆ ವಿಷ ಸೇವಿಸಿ, ಸಿದ್ದಪ್ಪ ಜಗತಿ ಕೊರಳಿಗೆ ಹಗ್ಗ ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದರು. ಆತ್ಮಹತ್ಯೆಗೆ ಯತ್ನಿಸಿದ ಇಬ್ಬರೂ ರೈತರು ಕಬ್ಬು ಮಾರಿದರೂ ಹಣ ಕೈ ಸೇರದೆ ಸಾಲಗಾರರ ಕಾಟ ಹೆಚ್ಚಾಗಿದ್ದಕ್ಕೆ ಮನನೊಂದಿದ್ದಾರೆ ಎಂದು ಸ್ಥಳದಲ್ಲಿದ್ದ ಇತರೆ ಕಬ್ಬು ಬೆಳೆಗಾರರು ತಿಳಿಸಿದ್ದಾರೆ.