ದಕ್ಷಿಣ ರಾಜ್ಯಗಳತ್ತ ಗಮನ ನೆಟ್ಟ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ

ಬೆಂಗಳೂರಿನಲ್ಲಿ ಏಪ್ರಿಲ್ ೨ ರಿಂದ ೪ ರವರೆಗೆ ನಡೆಯಲಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ, ಪಕ್ಷವನ್ನು ದಕ್ಷಿಣ ರಾಜ್ಯಗಳಲ್ಲಿ ವಿಸ್ತರಿಸುವ
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಬೆಂಗಳೂರಿನಲ್ಲಿ ಏಪ್ರಿಲ್ ೨ ರಿಂದ ೪ ರವರೆಗೆ ನಡೆಯಲಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ, ಪಕ್ಷವನ್ನು ದಕ್ಷಿಣ ರಾಜ್ಯಗಳಲ್ಲಿ ವಿಸ್ತರಿಸುವ-ಬಲಪಡಿಸುವ ನಿಟ್ಟಿನಲ್ಲಿ ಬಿಜೆಪಿ ಪಕ್ಷ ಗಮನ ಹರಿಸಲಿದೆ. ಬಿಹಾರವನ್ನು ಒಳಗೊಂಡಂತೆ ಮುಂಬರುವ ವಿಧಾನಸಭಾ ಚುನಾವಣೆಗಳಲ್ಲಿ ಗೆಲುವಿಗೆ ತಂತ್ರಗಾರಿಕೆ ಹೆಣೆಯಲು ಕೂಡ ಚಿಂತನೆ ನಡೆಸಲಾಗುವುದು ಎಂದು ರಾಜ್ಯದ ಬಿಜೆಪಿ ವಕ್ತಾರೆ ಮಾಳವಿಕಾ ಅವಿನಾಶ್ ತಿಳಿಸಿದ್ದಾರೆ.

"ಕರ್ನಾಟಕದ ಗೆಲುವನ್ನು ಇತರ ದಕ್ಷಿಣ ರಾಜ್ಯಗಳಿಗೆ ನಾವು ವಿಸ್ತರಿಸಬೇಕೆಂದಿದ್ದೇವೆ, ಹಾಗೆಯೇ ಬಿಹಾರ, ಪಶ್ಚಿಮ ಬಂಗಾಳ ಮತ್ತು ಇನ್ನಿತರ ರಾಜ್ಯಗಳ ವಿಧಾನ ಸಭಾ ಚುನಾವಣೆಗಳ ಬಗ್ಗೆಯೂ ಚಿಂತನೆ ನಡೆಸಲಿದ್ದೇವೆ" ಎಂದಿದ್ದಾರೆ.

ರಾಷ್ಟ್ರೀಯ ಬಿಜೆಪಿ ಪದಾಧಿಕಾರಿಗಳ ಸಭೆ ಏಪ್ರಿಲ್ ೨ ರಂದು ನಡೆಯಲಿದ್ದು, ಏಪ್ರಿಲ್ ೩ ಮತ್ತು ೪ ರಂದು ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯಲಿದೆ. ಏಪ್ರಿಲ್ ೨ ರಂದು ನರೇಂದ್ರ ಮೋದಿ ನಗರಕ್ಕೆ ಆಗಮಿಸಲಿದ್ದು, ಮೂರು ದಿನದ ಸಭೆಯಲ್ಲಿ ಭಾಗಿಯಾಗಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com