ಒಂದಂಕಿ ಲಾಟರಿ ಹಗರಣ: ಹೆಚ್ಚುವರಿ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಸಸ್ಪೆಂಡ್

ಒಂದಂಕಿ ಲಾಟರಿ ಹಗರಣದಲ್ಲಿ ಭಾಗಿಯಾದ ಆರೋಪದ ಮೇಲೆ ಬೆಂಗಳೂರು ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ರನ್ನು ರಾಜ್ಯ ಸರ್ಕಾರ...
ಅಲೋಕ್ ಕುಮಾರ್
ಅಲೋಕ್ ಕುಮಾರ್
Updated on

ಬೆಂಗಳೂರು: ಒಂದಂಕಿ ಲಾಟರಿ ಹಗರಣದಲ್ಲಿ ಭಾಗಿಯಾದ ಆರೋಪದ ಮೇಲೆ ಬೆಂಗಳೂರು ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ರನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿ ಆದೇಶ ಹೊರಡಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಕೌಶಿಕ್‌ ಮುಖರ್ಜಿ ಹಾಗೂ ಡಿಜಿಪಿ ಅವರು ಚರ್ಚೆ ನಡೆಸಿದ್ದು, ಬಳಿಕ ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅವರ ಅಮಾನತು ಮಾಡಲಾಗಿದೆ.

ಪ್ರಕರಣದಲ್ಲಿ ಹೆಚ್ಚುವರಿ ಪೊಲೀಸ್‌ ಆಯುಕ್ತ ಅಲೋಕ್‌ ಕುಮಾರ್‌ ಭಾಗಿಯಾದ ಆರೋಪ ಕೇಳಿ ಬಂದ ಬೆನ್ನಲ್ಲೇ ಸರ್ಕಾರ ಅವರನ್ನು ಸೇವೆಯಿಂದ ಅಮಾನತುಗೊಳಿಸಿದೆ. ಶನಿವಾರ ಸಂಜೆ ಪ್ರಕರಣ ಸಂಬಂಧ ಸಿಐಡಿ ಅಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಧ್ಯಂತರ ವರದಿಯನ್ನು ಸಲ್ಲಿಸಿದ ಕೆಲ ಹೊತ್ತಿನಲ್ಲೇ ಸರ್ಕಾರ ಈ ಆದೇಶ ಹೊರಡಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com