ತೆಲಂಗಾಣ ಅಣೆಕಟ್ಟಿನಲ್ಲಿ ಮುಳುಗಿದ ೬ ಯುವ ಬಾಲಕರು

ತೆಲಂಗಾಣದ ಕರೀಂನಗರ ಜಿಲ್ಲೆಯ ಅಣೆಕಟ್ಟಿನಲ್ಲಿ ಸೋಮವಾರ ಆರು ಯುವ ಬಾಲಕರು ಮುಳುಗಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಹೈದರಾಬಾದ್: ತೆಲಂಗಾಣದ ಕರೀಂನಗರ ಜಿಲ್ಲೆಯ ಅಣೆಕಟ್ಟಿನಲ್ಲಿ ಸೋಮವಾರ ಆರು ಯುವ ಬಾಲಕರು ಮುಳುಗಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ನಾನಕ್ಕಾಗಿ ೮ ರಿಂದ ೧೩ ವರ್ಷದ ಒಳಗಿನ ಬಾಲಕರು ಕರೀಂನಗರ ಹೊರವಲಯದ ಪದಮನಗರ ಕೆಳ ಮನೈರ್ ಡ್ಯಾಮ್ ನಲ್ಲಿ ಇಳಿದಾಗ ಈ ಘಟನೆ ನಡೆದಿದೆ.

ಹತ್ತಿರದ ಮೈದಾನದಲ್ಲಿ ಕ್ರಿಕೆಟ್ ಆಡಿದ್ದ ಈ ಬಾಲಕರು ಸ್ನಾನಕ್ಕಾಗಿ ಅಣೆಕಟ್ಟಿಗೆ ಇಳಿದ ಪರಿಣಾಮ ಒಬ್ಬರ ನಂತರ ಇನ್ನೊಬ್ಬರು ಎಲ್ಲರೂ ಮುಳುಗಿ ಹೋಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕರು ಮನೆ ತಲುಪದಿದ್ದರಿಂದ ಅವರನ್ನು ಹುಡುಕುತ್ತಾ ಬಂದ ಪೋಷಕರು ಅಣೆಕಟ್ಟಿನ ದಡದಲ್ಲಿ ನೀರಿಗೆ ಇಳಿಯದ ಅವರ ಸ್ನೇಹಿತನೊಬ್ಬ ಅಘಾತಕ್ಕೊಳಗಾಗಿ ಕುಳಿತಿದ್ದನ್ನು ನೋಡಿದ್ದಾರೆ.

ನಂತರ ಪೋಷಕರು ಪೊಲೀಸರಿಗೆ ವಿಷಯ ತಿಳಿಸಿದ್ದು ಆರು ಸಂತ್ರಸ್ತ ಬಾಲಕರ ದೇಹಗಳನ್ನು ಪತ್ತೆ ಹಚ್ಚಿ ಅವರ ಕುಟುಂಬಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com