ಸಾಕ್ಷಿ ಮಹಾರಾಜ್
ಸಾಕ್ಷಿ ಮಹಾರಾಜ್

ಅಯೋಧ್ಯೆಯಲ್ಲಿ ಶೀಘ್ರವೇ ಭವ್ಯ ರಾಮಮಂದಿರ ನಿರ್ಮಾಣವಾಗಲಿದೆ: ಸಾಕ್ಷಿ ಮಹಾರಾಜ್

ಸದಾ ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿಯಲ್ಲಿರುವ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ರಾಮ ಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಹೇಳಿಕೆ ನೀಡಿದ್ದಾರೆ.

ಉನ್ನಾವೋ(ಯುಪಿ): ಸದಾ ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿಯಲ್ಲಿರುವ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ರಾಮ ಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಹೇಳಿಕೆ ನೀಡಿದ್ದಾರೆ.

2019ರ ಲೋಕಸಭೆ ಚುನಾವಣೆಗೂ ಮುನ್ನವೇ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಭವ್ಯವಾದ ರಾಮಮಂದಿರ ನಿರ್ಮಾಣವಾಗಲಿದೆ ಎಂಬ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.

ರಾಮಮಂದಿರ ನಿರ್ಮಾಣ ಮಾಡುವುದು ಬಿಜೆಪಿಗೆ ಸಮಸ್ಯೆ ಅಲ್ಲವೇ ಅಲ್ಲ. ಆದರೆ ಸಂತರಾದ ನಮಗೆ ಇದು ದೊಡ್ಡ ಸಮಸ್ಯೆ ಎಂದರು. ರಾಮ ಮಂದಿರ ಚಳುವಳಿ ವೇಳೆ ಎಲ್ಲಾ ಪಕ್ಷಗಳ ಬೆಂಬಲ ಕೇಳಿದ್ದೇವು. ಆದರೆ ಬಿಜೆಪಿ ಮಾತ್ರವೇ ತಮಗೆ ಬೆಂಬಲ ನೀಡಿದ್ದು ಎಂದು ಹೇಳಿದರು.

ಆದರೆ ಬಾಬರಿ ಹೆಸರು ಹೇಳಿಕೊಂಡು ಯಾರೊಬ್ಬರು ಒಂದೇ ಒಂದು ಕಲ್ಲನ್ನು ಸಹ ಅಲ್ಲಿ ಇಡಲು ಸಾಧ್ಯವಿಲ್ಲ ಎಂದು ಸಾಕ್ಷಿ ಮಹಾರಾಜ್ ಎಚ್ಚರಿಸಿದ್ದಾರೆ.

ಈ ಹಿಂದೆ ಹಿಂದೂ ಮಹಿಳೆಯರು ಕನಿಷ್ಠ ಪಕ್ಷ ನಾಲ್ಕು ಮಕ್ಕಳನ್ನು ಹೆರಬೇಕು ಎಂದು ಹೇಳಿಕೆ ನೀಡಿ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದ ಸಾಕ್ಷಿ ಮಹಾರಾಜ್, ರಾಹುಲ್ ಗಾಂಧಿ ಒಬ್ಬ ಹುಚ್ಚ ಎಂದು ಹೇಳಿ, ಹಲವೆಡೆ ಪ್ರತಿಭಟನೆ ಎದುರಿಸಿದ್ದರು.

Related Stories

No stories found.

Advertisement

X
Kannada Prabha
www.kannadaprabha.com