ಮೈಸೂರು ಮಹಾರಾಜನ ಪಟ್ಟ ಅಲಂಕರಿಸಿದ ಯದುವೀರ

ದಿ.ಶ್ರೀಕಂಠದತ್ತ ಒಡೆಯರ್ ಹಾಗೂ ರಾಣಿ ಪ್ರಮೋದಾದೇವಿ ಅವರ ದತ್ತು ಪುತ್ರ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಗುರುವಾರ ಮೈಸೂರಿನ...
ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್
ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್

ಮೈಸೂರು: ದಿ.ಶ್ರೀಕಂಠದತ್ತ ಒಡೆಯರ್ ಹಾಗೂ ರಾಣಿ ಪ್ರಮೋದಾದೇವಿ ಅವರ ದತ್ತು ಪುತ್ರ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಗುರುವಾರ ಮೈಸೂರಿನ ಮಹಾರಾಜನಾಗಿ ಹಾಗೂ ಯದುವಂಶದ 27ನೇ ದೊರೆಯನ್ನಾಗಿ ಪಟ್ಟಾಭಿಷೇಕ ಮಾಡಲಾಯಿತು.

ಅಂಬಾವಿಲಾಸ ಅರಮನೆಯಲ್ಲಿ ಇಂದು ಬೆಳಗ್ಗೆ 9.30ರಿಂದ 10.15ರೊಳಗೆ ಸಲ್ಲುವ ಶುಭಲಗ್ನದಲ್ಲಿ ನೂತನ ರಾಜ ಯದುವೀರ್ ಗೆ ಪಟ್ಟಾಭಿಷೇಕ ಮಹೋತ್ಸವ ನೆರವೇರಿಸಲಾಯಿತು.

ಯದುವಂಶದ ಸಂಪ್ರದಾಯದಂತೆ ಎಲ್ಲ ರೀತಿಯ ಪೂಜೆಗಳನ್ನು ನೆರವೇರಿಸಿದ ನಂತರ ಚಿನ್ನದ ಪಟ್ಟಿಯನ್ನು ಯದುವೀರ ಅವರಿಗೆ ಕಟ್ಟುವ ಮೂಲಕ ಪಟ್ಟಾಭಿಷೇಕ ಮಾಡಲಾಯಿತು. ಬಳಿಕ ಯದುವೀರ ಅವರಿಗೆ ನವಗ್ರಹ ಪೂಜೆ, ಪುರುಷಸೂಕ್ತ, ಶ್ರೀಸೂಕ್ತ ಇದ್ಯಾತಿ ಮಂತ್ರದಿಂದ ಪ್ರೋಕ್ಷಣೆ ಮಾಡಲಾಯಿತು.

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಸಂಸದ ಪ್ರಾತಾಪ ಸಿಂಹ, ಮಾಜಿ ಸಚಿವ ಎಚ್.ಎಂ.ರೇವಣ್ಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶ್ರೀನಿವಾಸ್ ಪ್ರಸಾದ್ ಸೇರಿದಂತೆ ಹಲವು ಗಣ್ಣಯರು ಭಾಗಿಯಾಗಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com