ಛೋಟಾ ರಾಜನ್ ನನ್ನು ಅಕ್ಟೋಬರ್ 25ರಂದು ಬಂಧಿಸಲಾಗಿತ್ತು. ಛೋಟಾ ರಾಜನ್ನ ಹಸ್ತಾಂತರ ಪ್ರಕ್ರಿಯೆಯು ಹವಾಮಾನ ವೈಪರೀತ್ಯದ ಕಾರಣದಿಂದ ಮುಂದೂಡಲಾಗಿತ್ತು. ಸನಿಹದಲ್ಲಿರುವ ಜ್ವಾಲಾಮುಖಿ ಪರ್ವತದಿಂದ ಎದ್ದ ಹೊಗೆಯಿಂದಾಗಿ ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಆವೃತವಾಗಿ, ನಿಲ್ದಾಣದ ಕಾರ್ಯಾಚರಣೆಯನ್ನು ಬಹುತೇಕ ಒಂದು ದಿನ ಮಟ್ಟಿದೆ ಮುಚ್ಚಲಾಗಿತ್ತು. ಈ ಹಿನ್ನಲೆಯಲ್ಲಿ ಹಸ್ತಾಂತರ ಪ್ರಕ್ರಿಯೆಗೆ ತಡೆಯಾಗಿತ್ತು.