ಆರೋಪ ಸಾಬೀತಾದರೆ ರಾಜಿನಾಮೆ ನೀಡುವೆ: ಸಚಿವ ಆಂಜನೇಯ

ಲಂಚದ ಪ್ರಕರಣಕ್ಕೆ ಸಂಬಂಧಿಸಿ ತಮ್ಮ ಮೇಲಿನ ಆರೋಪ ಸಾಬೀತಾದರೆ ತಕ್ಷಣವೇ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡುವುದಾಗಿ ಸಮಾಜ ಕಲ್ಯಾಣ ಸಚಿವ...
ಆಂಜನೇಯ
ಆಂಜನೇಯ
ಬೆಳಗಾವಿ: ಲಂಚದ ಪ್ರಕರಣಕ್ಕೆ ಸಂಬಂಧಿಸಿ ತಮ್ಮ ಮೇಲಿನ ಆರೋಪ ಸಾಬೀತಾದರೆ ತಕ್ಷಣವೇ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡುವುದಾಗಿ ಸಮಾಜ ಕಲ್ಯಾಣ ಸಚಿವ ಎಚ್. ಆಂಜನೇಯ ಹೇಳಿದ್ದಾರೆ. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಆರೋಪ ಬಂದ ತಕ್ಷಣ ಯಾರೂ ಆರೋಪಿಗಳಾಗುವುದಿಲ್ಲ. ನನ್ನ ರಾಜಿನಾಮೆ ಕೇಳುವವರ ವಿರುದ್ಧವೂ ಆರೋಪಗಳಿದ್ದು, ಅವರು ಕೂಡ ತಮ್ಮ ಸ್ಥಾನಗಳಿಗೆ ರಾಜಿನಾಮೆ ನೀಡಬೇಕು'' ಎಂದು ಆಗ್ರಹಿಸಿದರು. ತಮ್ಮ ರಾಜಕೀಯ ಏಳ್ಗೆ ಸಹಿಸದವರು ರಾಜಕೀಯವಾಗಿ ತಮ್ಮನ್ನು ಮುಗಿಸಲು ಷಡ್ಯಂತ್ರ ರೂಪಿಸಿದ್ದಾರೆ. ರಾಜ್ಯ ಸರ್ಕಾರ ಈಗಾಗಲೇ ತಮ್ಮ ವಿರುದ್ಧದ ಆರೋಪದ ಬಗ್ಗೆ ಸಿಐಡಿ ತನಿಖೆಗೆ ವಹಿಸಿದೆ. ತನಿಖೆಯ ಬಳಿಕ ಸತ್ಯಾಸತ್ಯತೆ ಹೊರಬರಲಿದೆ. ಆರೋಪ-ಗಳು ಯಾರನ್ನೂ ಬಿಟ್ಟಿಲ್ಲ. ರಾಜ್ಯಾದ್ಯಂತ ಮಠಾಧಿೀಶರು, ಸಂಘ ಸಂಸ್ಥೆಗಳ ವಿರುದ್ಧ ಆರೋಪಗಳು ಕೇಳಿಬರುತ್ತಿವೆ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com