ಲೋಕಾಯುಕ್ತರನ್ನು ಪದಚ್ಯುತಿ ಗೊಳಿಸ ಬೇಕೆಂಬ ಆಗ್ರಹ ಮಾತ್ರ ಇದುವರೆಗೆ ಪ್ರಬಲವಾಗಿ ಮೊಳಗುತ್ತಿತ್ತು. ಉಪಲೋಕಾಯುಕ್ತ ಸುಭಾಷ್ ಬಿ.ಅಡಿ ಅವರ ವಿರುದ್ಧದ ಭ್ರಷ್ಟಾಚಾರ ಆರೋಪ ವಾಗಲಿ, ಪದಚ್ಯುತಿ ಪ್ರಸ್ತಾಪವಾಗಲಿ ಸಾರ್ವಜನಿಕರ ಅವಗಾಹನೆಯಲ್ಲೇ ಇಲ್ಲ. ಆದರೆ ಅಡಿ ಅವರು ಲೋಕಾ ಮುಖ್ಯಸ್ಥರಾದರೆ ಸಿಎಂ ಸಿದ್ದರಾಮಯ್ಯ ಅವರ ಅಧಿಕಾರಕ್ಕೆ ಸಂಚಕಾರ ಉಂಟು ಮಾಡಬಹುದು ಎಂದು ಹೀಗೆ ಮಾಡಲಾಗಿದೆ ಎನ್ನಲಾಗಿದೆ.