ಬಿಜೆಪಿ ಶಾಸಕ ಜಗದೀಶ್ ಕುಮಾರ್ ಪಂಚಭೂತಗಳಲ್ಲಿ ಲೀನ

ನಿನ್ನೆ ಹೃದಯಾಘಾತದಿಂದ ನಿಧನರಾಗಿದ್ದ ಹೆಬ್ಬಾಳ ಬಿಜೆಪಿ ಶಾಸಕ ಆರ್. ಜಗದೀಶ್ ಕುಮಾರ್ ಅವರ ಅಂತ್ಯಕ್ರಿಯೆ ಹೆಬ್ಬಾಳದ ಚಿತಾಗಾರದಲ್ಲಿ ನಡೆಯಿತು...
ಜಗದೀಶ್ ಕುಮಾರ್
ಜಗದೀಶ್ ಕುಮಾರ್
Updated on

ಬೆಂಗಳೂರು: ನಿನ್ನೆ ಹೃದಯಾಘಾತದಿಂದ ನಿಧನರಾಗಿದ್ದ ಹೆಬ್ಬಾಳ ಬಿಜೆಪಿ ಶಾಸಕ ಆರ್. ಜಗದೀಶ್ ಕುಮಾರ್ ಅವರ ಅಂತ್ಯಕ್ರಿಯೆ ಹೆಬ್ಬಾಳದ ಚಿತಾಗಾರದಲ್ಲಿ ನಡೆಯಿತು.

ಸಕಲ ಸರ್ಕಾರಿ ಗೌರವಗಳೊಂದಿಗೆ ಜಗದೀಶ್ ಕುಮಾರ್ ಅವರ ಅಂತ್ಯಕ್ರಿಯೆ ನೆರವೇರಿಸಲಾಯಿತು.

ನಿನ್ನೆ ಬೆಳಗ್ಗೆ ವಿಧಾನಸೌಧಕ್ಕೆ ಆಗಮಿಸಿದ್ದ ಜಗದೀಶ್ ಕುಮಾರ್ ಅವರಿಗೆ ಮಧ್ಯಾಹ್ನದ ನಂತರ ಎದೆ ನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದರು.

ಮಾಜಿ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ಅವರ ಕಟ್ಟಾ ಬೆಂಬಲಿಗರಾಗಿದ್ದ ಜಗದೀಶ್ ಅವರು ವಿಧಾನಸಭೆ ಕಲಾಪಕ್ಕೆ ಯಾವಾಗಲೂ ಕೇಸರಿ ಶಾಲು ಧರಿಸಿ ಬರುತ್ತಿದ್ದರು. ಕಲಾಪದಲ್ಲಿ ವಿನೂತನವಾಗಿ ಪ್ರತಿಭಟಿಸುವ ಮೂಲಕ ಗಮನ ಸೆಳೆಯುತ್ತಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com