ಶಿವಸೇನೆ- ಬಿಜೆಪಿ ಒಡಕು?: ಬಿಜೆಪಿ ಮುಖಂಡ ಸುಧೀಂದ್ರ ಕುಲಕರ್ಣಿ ಮುಖಕ್ಕೆ ಮಸಿ ಬಳಿದ ಘಟನೆಯ ಹಿನ್ನೆಲೆಯಲ್ಲಿ, ಶಿವಸೇನೆ ಮತ್ತು ಬಿಜೆಪಿಯ ನಡುವೆ ತಲೆದೋರಿರುವ ಒಡಕು ದೊಡ್ಡದಾಗುತ್ತಿದೆ ಎಂಬ ಅನುಮಾನ ವ್ಯಕ್ತವಾಗಿದೆ. ಇತ್ತೀಚೆಗೆ ಬಿಜೆಪಿ ನಾಯಕರನ್ನು ಟೀಕಿಸುವ ಯಾವುದೇ ಅವಕಾಶವನ್ನೂ ಸೇನೆ ಬಿಟ್ಟಿಲ್ಲ.ಮೋದಿ, ಅಮಿತ್ ಶಾ, ಮುಖ್ಯಮಂತ್ರಿ ಫಡ್ನವಿಸ್ ಎಲ್ಲರೂ ಸೇನೆಯ ಟೀಕಾಸ್ತ್ರಕ್ಕೆ ಒಳಗಾಗಿದ್ದಾರೆ. ಒಂದು ವೇಳೆ ಸೇನೆ ಮಹಾರಾಷ್ಟ್ರದಲ್ಲಿ ಕೈಕೊಟ್ಟರೆ, ಸ್ವಂತವಾಗಿ ಸರಕಾರ ರಚಿಸುವ ಬಗ್ಗೆ ಬಿಜೆಪಿ ನಾಯಕರು ಮಾತುಕತೆ ನಡೆಸಿದ್ದಾರೆ ಎಂದು ಕೆಲ