ಆರೋಪಿಗಳ ಪತ್ತೆಗಾಗಿ ಕರ್ನಾಟಕ ಪೊಲೀಸರು ಕಳೆದ ಮೂರು ದಿನಗಳಿಂದ ಇನ್ನಿಲ್ಲದ ಪ್ರಯತ್ನ ಮಾಡಿದ್ದರು. ಆರೋಪಿಗಳು ಮಹಾರಾಷ್ಟ್ರದಲ್ಲಿ ಅಡಗಿರುವುದಾಗಿ ಮಾಹಿತಿ ಇತ್ತು. ಈ ಬಗ್ಗೆ ಕರ್ನಾಟಕ ಪೊಲೀಸರು ಮಹಾರಾಷ್ಟ್ರ ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ಮಾಹಿತಿ ಆಧಾರದ ಮೇಲೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಈ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲು ಕರ್ನಾಟಕ ಪೊಲೀಸ್ ತಂಡವೊಂದು ನಾಗ್ಪುರಕ್ಕೆ ತೆರಳುತ್ತಿದೆ.