ಪಿಎಸ್‌ಐ ಜಗದೀಶ್ ಹತ್ಯೆ ಪ್ರಕರಣ: ಇಬ್ಬರ ಬಂಧನ

ದೊಡ್ಡಬಳ್ಳಾಪುರ ನಗರ ಠಾಣೆ ಪಿಎಸ್‌ಐ ಜಗದೀಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ಸೋಮವಾರ ಇಬ್ಬರು ಆರೋಪಿಗಳನ್ನು...
ಎಸ್ಸೈ ಜಗದೀಶ್ ಅಂತಿಮ ಸಂಸ್ಕಾರದ ಚಿತ್ರ (ಸಂಗ್ರಹ ಚಿತ್ರ)
ಎಸ್ಸೈ ಜಗದೀಶ್ ಅಂತಿಮ ಸಂಸ್ಕಾರದ ಚಿತ್ರ (ಸಂಗ್ರಹ ಚಿತ್ರ)
Updated on

ಬೆಂಗಳೂರು: ದೊಡ್ಡಬಳ್ಳಾಪುರ ನಗರ ಠಾಣೆ ಪಿಎಸ್‌ಐ ಜಗದೀಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ಸೋಮವಾರ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಜಗದೀಶ್ ಹತ್ಯೆ ಆರೋಪಿಗಳಾದ ಮಧು ಹಾಗೂ ಹರೀಶ್ ಬಾಬುಗೆ ಸಹಾಯ ಮಾಡುತ್ತಿದ್ದ ಆರೋಪದ ಮೇಲೆ ಇಂದು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿಯಲ್ಲಿ ಮೆಕ್ಯಾನಿಕ್ ನಿಜಾಮ್ ಹಾಗೂ ಲ್ಯಾಬ್ ಟೆಕ್ನಿಷೀಯನ್ ಆಗಿರುವ ಮಂಜುನಾಥ್ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಆರೋಪಿಗಳನ್ನು ಚಿತ್ರದುರ್ಗದಿಂದ ಬೆಂಗಳೂರಿಗೆ ಕರತಂದಿರುವ ಪೊಲೀಸರು, ವಿಚಾರಣೆ ನಡೆಸುತ್ತಿದ್ದಾರೆ.

ಮಧು ಹರೀಶ್ ಬಾಬು ಕದ್ದ ಬೈಕ್‌ಗಳನ್ನು ನಿಜಾಮ್ ಬಳಿ ರಿಪೇರಿ ಮಾಡಿಸುತ್ತಿದ್ದರು ಮತ್ತು ಮಂಜುನಾಥ್ ಆರೋಪಿಗಳಿಗೆ ಸಿಮ್ ಸರಬರಾಜು ಮಾಡುತ್ತಿದ್ದ ಎನ್ನಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com