ಮೈಸೂರು ಮತ್ತು ಕಲಬುರಗಿಯಲ್ಲಿ ದಾಳಿ ಮಾಡಿದ ಅಧಿಕಾರಿಗಳು ಅಕ್ರಮವಾಗಿ ದಾಸ್ತಾನು ಇರಿಸಲಾಗಿದ್ದ 360 ಟನ್ ಬೇಳೆಕಾಳುಗಳನ್ನು ವಶಪಡಿಸಿಕೊಳ್ಳಲಾಗಿದೆ. ಅತಿ ಹೆಚ್ಚು ಅಂದರೆ 2,549 ಅನ್ನು ತೆಲಂಗಾಣದಲ್ಲಿ ವಶಪಡಿಸಿಕೊಳ್ಳಲಾಗಿದೆ. ಮಧ್ಯಪ್ರದೇಶದಲ್ಲಿ 2,295, ಆಂಧ್ರಪ್ರದೇಶದಲ್ಲಿ 600, ಮಹಾರಾಷ್ಟ್ರದಲ್ಲಿ 10 ಟನ್ ಗಳಷ್ಟು ಬೇಳೆಕಾಳುಗಳನ್ನು ವಶಪಡಿಸಿಕೊಳ್ಳಲಾಗಿದೆ. ತೊಗರಿಬೇಳೆ ಬೆಲೆ ಪ್ರತಿ ಕೆಜಿಗೆ ರು. 200ಕ್ಕೆ ಏರಿದೆ. ಕಳೆದ ಸಾಲಿನಲ್ಲಿ ರು.85 ಇದ್ದದ್ದು ಒಂದೇ ವರ್ಷದಲ್ಲಿ ಶೇ.135ರಷ್ಟು ಏರಿಕೆ ಆಗಿರುವುದು ಆತಂಕಕ್ಕೆ ಎಡೆಮಾಡಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ರಾಷ್ಟ್ರವ್ಯಾಪಿ ದಾಳಿಗೆ ಮುಂದಾಗಿದೆ.