ಕೇಂದ್ರ ಸಚಿವ ವಿಕೆ ಸಿಂಗ್ ವಿರುದ್ಧ ದೂರು

ದಲಿತರ ಕುರಿತಾದ ಅವಹೇಳನಕಾರಿ ಹೇಳಿಕೆ ನೀಡಿರುವ ಕೇಂದ್ರ ಸಚಿವ ವಿ.ಕೆ. ಸಿಂಗ್ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ...
ಕೇಂದ್ರ ಸಚಿವ ವಿ.ಕೆ. ಸಿಂಗ್
ಕೇಂದ್ರ ಸಚಿವ ವಿ.ಕೆ. ಸಿಂಗ್

ಬೆಂಗಳೂರು: ದಲಿತರ ಕುರಿತಾದ ಅವಹೇಳನಕಾರಿ ಹೇಳಿಕೆ ನೀಡಿರುವ ಕೇಂದ್ರ ಸಚಿವ ವಿ.ಕೆ. ಸಿಂಗ್ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಯುವ ಕಾಂಗ್ರೆಸ್  ಉಪಾಧ್ಯಕ್ಷ ಆನಂದ್ ಅವರು ದೂರು ನೀಡಿದ್ದು, ಕೇಂದ್ರ ಸಚಿವರಾಗಿರುವ ವಿ.ಕೆ. ಸಿಂಗ್ ಅವರ ಹೇಳಿಕೆ ದಲಿತರನ್ನು ಅವಮಾನಿಸಿದ್ದು, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಅವರು ತಮ್ಮ ಹೇಳಿಕೆಯನ್ನು ವಾಪಸ್ ಪಡೆದು ದೇಶದ ಜನತೆಯ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.

ಪ್ರಕರಣ ಹೊರ ರಾಜ್ಯದಲ್ಲಿ ನಡೆದಿರುವ ಕಾರಣ ದೂರು ತೆಗೆದುಕೊಂಡು ಹಿಂಬರಹ ನೀಡಲಾಗಿದೆ ಎಂದು ಹೈ ಗ್ರೌಂಡ್ಸ್ ಪೊಲೀಸರು ತಿಳಿಸಿದ್ದಾರೆ. ಹರಿಯಾಣದಲ್ಲಿ ದಲಿತ ಮಕ್ಕಳ  ಹತ್ಯೆ ಕುರಿತಂತೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ ವಿ.ಕೆ.ಸಿಂಗ್, ಎಲ್ಲೋ ನಾಯಿಗೆ ಕಲ್ಲು ಹೊಡೆದರೆ ಕೇಂದ್ರವನ್ನು ದೂಷಿಸುವುದು ಸರಿಯಲ್ಲ. ಇಂತಹ ವಿಚಾರಗಳು ಸ್ಥಳೀಯ ಆಡಳಿತದ ಜವಾಬ್ದಾರಿಯಾಗಿರುತ್ತದೆ ಎಂದು ಹೇಳಿಕೆ ನೀಡಿದ್ದರು. ಸಿಂಗ್ ಅವರ ಹೇಳಿಕೆ ರಾಷ್ಟ್ರಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com