ಶೀಘ್ರ ಖಾಲಿ ಇರುವ 4 ಸ್ಥಾನ ಭರ್ತಿ: ಸಂಪುಟ ವಿಸ್ತರಣೆ ಖಚಿತಪಡಿಸಿದ ಸಿಎಂ

ರಾಜ್ಯ ಸಚಿವ ಸಂಪುಟ ವಿಸ್ತರಣೆಯೋ, ಪುನಾರಚನೆಯೋ ಅಥವಾ ಯಥಾಸ್ಥಿತಿ ಪಾಲನೆಯೋ ಎಂಬ ವಿಚಾರದಲ್ಲಿ ರಾಜ್ಯ ಮತ್ತು ಕೇಂದ್ರ ನಾಯಕತ್ವದಲ್ಲಿ...
ಸಿದ್ದರಾಮಯ್ಯ
ಸಿದ್ದರಾಮಯ್ಯ
Updated on

ನವದೆಹಲಿ: ರಾಜ್ಯ ಸಚಿವ ಸಂಪುಟ ವಿಸ್ತರಣೆಯೋ, ಪುನಾರಚನೆಯೋ ಅಥವಾ ಯಥಾಸ್ಥಿತಿ ಪಾಲನೆಯೋ ಎಂಬ ವಿಚಾರದಲ್ಲಿ ರಾಜ್ಯ ಮತ್ತು ಕೇಂದ್ರ ನಾಯಕತ್ವದಲ್ಲಿ ಉಂಟಾಗಿದ್ದ ಗೊಂದಲಕ್ಕೆ ಬುಧವಾರ ತೆರೆ ಬಿದ್ದಿದ್ದು, ಶೀಘ್ರದಲ್ಲೇ ಖಾಲಿ ಇರುವ ನಾಲ್ಕು ಸ್ಥಾನಗಳನ್ನು ಭರ್ತಿ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಇಂದು ದೆಹಲಿಯಲ್ಲಿ ಸಚಿವ ಸಂಪುಟ ವಿಸ್ತರಣೆಯನ್ನು ಖಚಿತಪಡಿಸಿದ ಸಿಎಂ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು ಸಂಪುಟ ಸೇರುವುದಾದರೆ ಸ್ವಾಗತ ಎಂದರು.

ಇದೇ ವೇಳೆ ಸ್ಪೀಕರ್ ಬದಲಾವಣೆ ಕುರಿತು ಯಾವುದೇ ಪ್ರತಿಕ್ರಿಯೆ ನೀಡಲು ಸಿಎಂ ನಿರಾಕರಿಸಿದರು.

ಸ್ಪೀಕರ್ ಕಾಗೋಡು ತಿಮ್ಮಪ್ಪ, ಡಾ.ಜಿ.ಪರಮೇಶ್ವರ, ವಿನಯ್ ಕುಲಕರ್ಣಿ ಹಾಗೂ ಎ.ಮಂಜು ಅವರು ಸಚಿವ ಸಂಪುಟ ಸೇರುವ ಸಾಧ್ಯತೆ ಇದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com