ಸಿಎಂ ಸಿದ್ದರಾಮಯ್ಯ ಮತ್ತು ಸಿ.ಟಿ ರವಿ
ಸಿಎಂ ಸಿದ್ದರಾಮಯ್ಯ ಮತ್ತು ಸಿ.ಟಿ ರವಿ

ಗೋಮಾಂಸ ಸೇವನೆ ಬಗ್ಗೆ ಸಿಎಂ ಹೇಳಿಕೆ: ರಾಜ್ಯಪಾಲರಿಗೆ ದೂರು ನೀಡಲು ಬಿಜೆಪಿ ನಿರ್ಧಾರ

ಗೋಮಾಂಸ ಸೆವನೇ ಬಗ್ಗೆ ಹೇಳಿಕೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲು ಚಿಂತನೆ ನಡೆಸಿದೆ...
Published on

ಮೈಸೂರು: ನನಗೆ ಗೋಮಾಂಸ ತಿನ್ನಬೇಕೆನಿಸಿದರೆ ತಿನ್ನುತ್ತೇನೆ, ಇದನ್ನು ತಡೆಯಲು ನೀವು ಯಾರು ಎಂದು ಬಿಜೆಪಿಗೆ ಸವಾಲು ಹಾಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲು ಚಿಂತನೆ ನಡೆಸಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದ್ದಾರೆ.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, 1964ರ ಗೋ ಸಂರಕ್ಷಣೆ ಕಾಯ್ದೆ ಪ್ರಕಾರ ಹಸು, ಕರು, ಎತ್ತುಗಳನ್ನು ಕೊಲ್ಲುವಂತಿಲ್ಲ ಎಂದು ಉಲ್ಲೇಖವಾಗಿದೆ.  ಜವಾಬ್ದಾರಿಯುತ ಸ್ಥಾನದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚೋದನಕಾರಿ ಹೇಳಿಕೆ ನೀಡಿ ಸಂವಿಧಾನಕ್ಕೆ ಅಪಚಾರ ಎಸಗಿದ್ದಾರೆ ಎಂದು ಆರೋಪಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರ ಈ ವರ್ತನೆ ವಿರುದ್ಧ ಅಗತ್ಯ ಕಾನೂನು ಕ್ರಮ ಕ್ರಮ ಕೈಗೊಳ್ಳುವಂತೆ ರಾಜ್ಯಪಾಲರನ್ನು ಒತ್ತಾಯಿಸುತ್ತೇವೆ’ ಎಂದು ಸಿ.ಟಿ ರವಿ ಹೇಳಿದ್ದಾರೆ.

ನಾನು ಇದುವರೆಗೆ ಗೋಮಾಂಸ ತಿಂದಿಲ್ಲ. ಗೋಮಾಂಸ ತಿನ್ನಬೇಕೆನಿಸಿದರೆ, ತಿನ್ನುತ್ತೇನೆ. ಇದನ್ನು ತಡೆಯಲು ನೀವು ಯಾರು? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ಹಾಗೂ ಸಂಘ ಪರಿವಾರಕ್ಕೆ ಯುವ ಕಾಂಗ್ರೆಸ್‌ ಸಭೆಯಲ್ಲಿ  ಪ್ರಶ್ನಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com