ನೂತನ ಸಚಿವರಿಗೆ ಖಾತೆ ಹಂಚಿಕೆ: ಪರಮೇಶ್ವರ್ ಗೆ ಗೃಹ ಖಾತೆ

ನಿನ್ನೆಯಷ್ಟೇ ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸಿ ಸಂಪುಟಕ್ಕೆ ಸೇರ್ಪಡೆಯಾದಂತಹ ನೂತನ ನಾಲ್ಕು ಸಚಿವರಿಗೆ...
ಪ್ರಮಾಣ ವಚನ ಸ್ವೀಕರಿಸುತ್ತಿರುವ ನೂತನ ಸಚಿವರು
ಪ್ರಮಾಣ ವಚನ ಸ್ವೀಕರಿಸುತ್ತಿರುವ ನೂತನ ಸಚಿವರು
Updated on
ಬೆಂಗಳೂರು: ನಿನ್ನೆಯಷ್ಟೇ ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸಿ ಸಂಪುಟಕ್ಕೆ ಸೇರ್ಪಡೆಯಾದಂತಹ ನೂತನ ನಾಲ್ಕು ಸಚಿವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಖಾತೆ ಹಂಚಿಕೆ ಮಾಡಿದ್ದಾರೆ.
ಜಿ ಪರಮೇಶ್ವರ್ ಅವರಿಗೆ ಗೃಹ ಖಾತೆ, ವಿನಯ್ ಕುಲಕರ್ಣಿಗೆ ಗಣಿ ಮತ್ತು ಭೂ ವಿಜ್ಞಾನ, ಅರಕಲಗೂಡು ಶಾಸಕ ಎ ಮಂಜು ಅವರಿಗೆ ಪಶು ಸಂಗೋಪನೆ ಖಾತೆ ನೀಡಲಾಗಿದ್ದು, ಮನೋಹರ್ ತಹಶೀಲ್ದಾರ್ ಅವರಿಗೆ ಅಬಕಾರಿ ಖಾತೆ ನೀಡಲಾಗಿದೆ. 
ಖಾತೆ ಹಂಚಿಕೆ ಮಾಡಿದ ಪಟ್ಟಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ಕಳುಹಿಸಿಕೊಟ್ಟಿದ್ದಾರೆ. ಈ ಮೂಲಕ ಕೆಜೆ ಜಾರ್ಜ್ ಅವರ ಸ್ಥಾನಕ್ಕೆ ಡಾ.ಜಿ ಪರಮೇಶ್ವರ್ ಅವರನ್ನು ತರಲಾಗಿದೆ. 
ಇನ್ನು ಗೃಹ ಸಚಿವರಾಗಿದ್ದ ಕೆಜೆ ಜಾರ್ಜ್ ಅವರಿಗೆ ಬೆಂಗಳೂರು ಉಸ್ತುವಾರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಖಾತೆಯನ್ನು ಕೊಡಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com