ನೂತನ ಸಚಿವರಿಗೆ ಖಾತೆ ಹಂಚಿಕೆ: ಪರಮೇಶ್ವರ್ ಗೆ ಗೃಹ ಖಾತೆ

ನಿನ್ನೆಯಷ್ಟೇ ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸಿ ಸಂಪುಟಕ್ಕೆ ಸೇರ್ಪಡೆಯಾದಂತಹ ನೂತನ ನಾಲ್ಕು ಸಚಿವರಿಗೆ...
ಪ್ರಮಾಣ ವಚನ ಸ್ವೀಕರಿಸುತ್ತಿರುವ ನೂತನ ಸಚಿವರು
ಪ್ರಮಾಣ ವಚನ ಸ್ವೀಕರಿಸುತ್ತಿರುವ ನೂತನ ಸಚಿವರು
ಬೆಂಗಳೂರು: ನಿನ್ನೆಯಷ್ಟೇ ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸಿ ಸಂಪುಟಕ್ಕೆ ಸೇರ್ಪಡೆಯಾದಂತಹ ನೂತನ ನಾಲ್ಕು ಸಚಿವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಖಾತೆ ಹಂಚಿಕೆ ಮಾಡಿದ್ದಾರೆ.
ಜಿ ಪರಮೇಶ್ವರ್ ಅವರಿಗೆ ಗೃಹ ಖಾತೆ, ವಿನಯ್ ಕುಲಕರ್ಣಿಗೆ ಗಣಿ ಮತ್ತು ಭೂ ವಿಜ್ಞಾನ, ಅರಕಲಗೂಡು ಶಾಸಕ ಎ ಮಂಜು ಅವರಿಗೆ ಪಶು ಸಂಗೋಪನೆ ಖಾತೆ ನೀಡಲಾಗಿದ್ದು, ಮನೋಹರ್ ತಹಶೀಲ್ದಾರ್ ಅವರಿಗೆ ಅಬಕಾರಿ ಖಾತೆ ನೀಡಲಾಗಿದೆ. 
ಖಾತೆ ಹಂಚಿಕೆ ಮಾಡಿದ ಪಟ್ಟಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ಕಳುಹಿಸಿಕೊಟ್ಟಿದ್ದಾರೆ. ಈ ಮೂಲಕ ಕೆಜೆ ಜಾರ್ಜ್ ಅವರ ಸ್ಥಾನಕ್ಕೆ ಡಾ.ಜಿ ಪರಮೇಶ್ವರ್ ಅವರನ್ನು ತರಲಾಗಿದೆ. 
ಇನ್ನು ಗೃಹ ಸಚಿವರಾಗಿದ್ದ ಕೆಜೆ ಜಾರ್ಜ್ ಅವರಿಗೆ ಬೆಂಗಳೂರು ಉಸ್ತುವಾರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಖಾತೆಯನ್ನು ಕೊಡಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com