ಬೆಂಗಳೂರು: ಕಳೆದ ಹಲವು ದಿನಗಳಿಂದ ಅನಿಯಮಿತ ಲೋಡ್ ಶೆಡ್ಡಿಂಗ್ ನಿಂದ ಕಂಗೆಟ್ಟಿದ್ದ ಜನತೆಗೆ ಗಣೇಶ ಚತುರ್ಥಿ ಪ್ರಯುಕ್ತ ಬೆಸ್ಕಾಂ ಸಿಹಿ ಸುದ್ದಿ ನೀಡಿದೆ.
ರಾಜ್ಯದಲ್ಲಿ ವ್ಯಾಪಿಸಿರುವ ಬರದ ನಿಮಿತ್ತ ವಿದ್ಯುತ್ ಉತ್ಪಾದನೆಯಲ್ಲೂ ಇಳಿಮುಖವಾಗಿದೆ ಎಂಬ ನೆಪ ನೀಡಿ ಲೋಡ್ ಶೆಡ್ಡಿಂಗ್ ಮಾಡುತ್ತಿದ್ದ ರಾಜ್ಯ ಸರ್ಕಾರ ಈ ಸಿಹಿ ಸುದ್ದಿ ಪ್ರಕಟಿಸಿದೆ. ಸೆಪ್ಟಂಬರ್ 16ರಿಂದ ಇನ್ನು ಮುಂದೆ ಯಾವುದೇ ಲೋಡ್ ಶೆಡ್ಡಿಂಗ್ ಇರುವುದಿಲ್ಲ.
ಬೆಸ್ಕಾಂ ವ್ಯಾಪ್ತಿಯಲ್ಲಿರುವ ಬೆಂಗಳೂರು ನಗರ ಹಾಗೂ ಇತರೆ ಎಲ್ಲ ನಗರಸಭೆ, ಪುರಸಭೆ ಹಾಗೂ ಹಳ್ಳಿಗಳಲ್ಲಿ ಲೋಡ್ ಶೆಡ್ಡಿಂಗ್ ಮಾಡುವುದಿಲ್ಲ ಎಂದು ಪ್ರಕಟಣೆ ಹೊರಡಿಸಿದೆ.
Advertisement