ಚೆನ್ನೈ ನಲ್ಲಿ ಸ್ಪರ್ಧಿಸಲಿರುವ ಜಯಲಲಿತಾ; ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಚೆನ್ನೈನ ರಾಧಾಕೃಷ್ಣ ನಗರದಿಂದ ಮರು ಆಯ್ಕೆಗಾಗಿ ಸ್ಪರ್ಧಿಸಲಿದ್ದೇನೆ ಎಂದು ತಮಿಳುನಾಡಿನ ಆಡಳಿತ ಪಕ್ಷ ಎಐಡಿಎಂಕೆ ಪ್ರಧಾನ ಕಾರ್ಯದರ್ಶಿ ಮತ್ತು ಮುಖ್ಯಮಂತ್ರಿ ಜೆ ಜಯಲಲಿತಾ ಸೋಮವಾರ
ತಮಿಳುನಾಡಿನ ಆಡಳಿತ ಪಕ್ಷ ಎಐಡಿಎಂಕೆ ಪ್ರಧಾನ ಕಾರ್ಯದರ್ಶಿ ಮತ್ತು ಮುಖ್ಯಮಂತ್ರಿ ಜೆ ಜಯಲಲಿತಾ
ತಮಿಳುನಾಡಿನ ಆಡಳಿತ ಪಕ್ಷ ಎಐಡಿಎಂಕೆ ಪ್ರಧಾನ ಕಾರ್ಯದರ್ಶಿ ಮತ್ತು ಮುಖ್ಯಮಂತ್ರಿ ಜೆ ಜಯಲಲಿತಾ

ಚೆನ್ನೈ: ಚೆನ್ನೈನ ರಾಧಾಕೃಷ್ಣ ನಗರದಿಂದ ಮರು ಆಯ್ಕೆಗಾಗಿ ಸ್ಪರ್ಧಿಸಲಿದ್ದೇನೆ ಎಂದು ತಮಿಳುನಾಡಿನ ಆಡಳಿತ ಪಕ್ಷ ಎಐಡಿಎಂಕೆ ಪ್ರಧಾನ ಕಾರ್ಯದರ್ಶಿ ಮತ್ತು ಮುಖ್ಯಮಂತ್ರಿ ಜೆ ಜಯಲಲಿತಾ ಸೋಮವಾರ ಘೋಷಿಸಿದ್ದಾರೆ.

ಇತರ ಪಕ್ಷಗಳು ತಮ್ಮ ಮೈತ್ರಿ ಪಕ್ಷಗಳೊಂದಿಗೆ ಸ್ಥಾನ ಹಂಚಿಕೆಯನ್ನು ಇನ್ನು ಚರ್ಚಿಸುತ್ತಿರುವಾಗಲೇ ಜಯಲಲಿತಾ ತಮಿಳುನಾಡು, ಪುದುಚೆರಿ ಮತ್ತು ಕೇರಳ ವಿಧಾನಸಭಾ ಚುನಾವಣೆಗಳ ಐಡಿಎಂಕೆ ಪಕ್ಷದ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ.

ತಮಿಳುನಾಡಿನ ೨೩೪ ಕ್ಷೇತ್ರಗಳ ೨೨೭ ಸ್ಥಾನಗಳಲ್ಲಿ ಎಐಡಿಎಂಕೆ ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದರೆ, ಉಳಿದ ಎಂಟು ಸ್ಥಾನಗಳನ್ನು ಮೈತ್ರಿ ಪಕ್ಷಗಳಿಗೆ ಬಿಟ್ಟುಕೊಟ್ಟಿದೆ.

ಪುದುಚೇರಿಯಲ್ಲಿ ೩೦ ಸ್ಥಾನಗಳಿಗೆ ಹಾಗೂ ಕೇರಳದಲ್ಲಿ ಏಳು ಕ್ಷೇತ್ರಗಳಲ್ಲಿ ಎಐಡಿಎಂಕೆ ಸ್ಪರ್ಧಿಸಲಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com