ಇದೇ ವೇಳೆ, ಪಿಯು ಮೌಲ್ಯಮಾಪನ ಬಹಿಷ್ಕರಿಸಿರುವ ಉಪನ್ಯಾಸಕರ ಬಗ್ಗೆ ಪ್ರತಿಕ್ರಿಯಿಸಿದ ಕಿಮ್ಮನೆ ರತ್ನಕಾರ, ಮೌಲ್ಯ ಮಾಪನ ಕುರಿತು ಯಾರಿಗೂ ಆತಂಕ ಬೇಡ. ಉಪನ್ಯಾಸಕರು ಮುಷ್ಕರ ಹಿಂಪಡೆದು, ಮೌಲ್ಯಮಾಪನದಲ್ಲಿ ಭಾಗಿಯಾಗುತ್ತಾರೆ ಎಂಬ ವಿಶ್ವಾಸವಿದೆ. ಒಂದು ವೇಳೆ ಮೌಲ್ಯಮಾಪನಕ್ಕೆ ನಿರಾಕರಿಸಿದೆ ಸರ್ಕಾರ ಅದಕ್ಕೆ ಬೇರೆ ವ್ಯವಸ್ಥೆ ಮಾಡುತ್ತದೆ ಮತ್ತು ನಿಗದಿತ ಸಮಯದಲ್ಲೇ ಪಿಯು ಫಲಿತಾಂಶ ಪ್ರಕಟವಾಗಲಿದೆ ಎಂದು ಪೋಷಕರು ಹಾಗೂ ವಿದ್ಯಾರ್ಥಿಗಳಿಗೆ ಅಭಯ ನೀಡಿದ್ದಾರೆ.