ನವದೆಹಲಿ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ರಾಜ್ಯ ಬಿಜೆಪಿ ಸಾರಥ್ಯ ನೀಡಿರುವುದಕ್ಕೆ ಖಾರವಾಗಿಯೇ ಪ್ರತಿಕ್ರಿಯಿಸಿರುವ ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರು, ಬಿಜೆಪಿ ರಾಜ್ಯಾಧ್ಯಕ್ಷರು ಯಾರಾಗುತ್ತಿದ್ದಾರೆ ಎನ್ನುವುದು ಈಗ ರ್ಚಚಿಸಬೇಕಾದ ವಿಚಾರವೇ ಅಲ್ಲ. ಕೇಂದ್ರ ಸರ್ಕಾರ ಮೊದಲು ರಾಜ್ಯದ ಬರ ಪರಿಸ್ಥಿತಿಗೆ ಸ್ಪಂದಿಸಲಿ ಎಂದಿದ್ದಾರೆ.