ಜಿಲ್ಲಾ ಖಜಾನೆಯಲ್ಲಿಡಲಾಗಿದ್ದ ಪ್ರಶ್ನೆಪತ್ರಿಕೆಗಳ ಬಾಕ್ಸ್ ಗಳನ್ನು ರಾಜ್ಯದ ಎಲ್ಲ ಜಿಲ್ಲೆಗಳಿಗೂ ಇಂದು ಬೆಳಗ್ಗೆ ರವಾನೆ ಮಾಡಲಾಗಿದ್ದು, ಇದಕ್ಕಾಗಿ ಭಾನುವಾರ ಸಂಜೆಯೇ ವಿಆರ್ಎಲ್ ಲಾಜಿಸ್ಟಿಕ್ಸ್, ಮಾರುತಿ ಪಾರ್ಸಲ್ ಕ್ಯಾರಿಯರ್ಸ್ (ಎಂಪಿಸಿ), ಅಕ್ಷಯ ಪಾತ್ರ, ಡಿಟಿಡಿಸಿ ಸಂಸ್ಥೆಗಳ ಸುಭದ್ರ ಕವಚವಿರುವ ವಾಹನಗಳನ್ನು ತರಿಸಲಾಗಿತ್ತು. ಆಯಾ ಜಿಲ್ಲೆ ಉಪ ವಿಭಾಗಾಧಿಕಾರಿ, ತಹಸೀಲ್ದಾರ್ ಉಸ್ತುವಾರಿಯಲ್ಲಿ ವಾಹನಗಳು ತೆರಳಲಿವೆ ಎಂದು ತಿಳಿದುಬಂದಿದೆ.