ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ನಲ್ಲಿ ಮ್ಯಾಟ್ರಿಕ್ಸ್ ಇಮೇಂಜಿಂಗ್ ಸಲ್ಯೂಷನ್ಸ್ ಕಚೇರಿ ಹೊಂದಿದ್ದು, ಇದೀಗ ಸರ್ಕಾರಿ ಆಸ್ಪತ್ರೆಗಳಲ್ಲಿ ಲ್ಯಾಬ್ ಆರಂಭಿಸಲು ಕಂಪನಿಗೆ ಗುತ್ತಿಗೆ ನೀಡಲಾಗಿದೆ. ಆದರೆ ಸಿಎಂ ಹಾಗೂ ಸಚಿವ ಸಂಪುಟದ ಸದಸ್ಯರ ಕುಟುಂಬ ಸರ್ಕಾರದೊಂದಿಗೆ ಯಾವುದೇ ಉದ್ಯಮದಲ್ಲಿ ಪಾಲ್ಗೊಳ್ಳುವುದಾಗಲಿ ಅಥವಾ ಸರ್ಕಾರಕ್ಕೆ ಯಾವುದೇ ಸೇವೆ ಒದಗಿಸುವಂತಿಲ್ಲ ಎಂಬ ನೀತಿ ಸಂಹಿತೆ ಇದೆ. ಆದರೆ ನಿಯಮ ಮೀರಿ ಸಿಎಂ ಪುತ್ರನ ಸಂಸ್ಥೆಗೆ ಡಯಾಗ್ನೋಸ್ಟಿಕ್ ಘಟಕ ತೆರೆಯಲು ಅನುಮತಿ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಯತೀಂದ್ರ ಅವರು ಕಂಪನಿಯಿಂದ ಹೊರ ಬಂದಿದ್ದಾರೆ.