ಗೊರಗುಂಟೆಪಾಳ್ಯ ಸುತ್ತಮುತ್ತ ಅಂಗಡಿ, ಮುಂಗಟ್ಟು ಬಂದ್ ಮಾಡಲಾಗಿದೆ. ಬೆಂಗಳೂರಿನ ಹಲವಾರು ಭಾಗಗಳಲ್ಲಿ ಪೊಲೀಸರು ಲಾಠಿ ಚಾರ್ಜ್ ಮಾಡುತ್ತಿದ್ದಾರೆ. ಹೊಸೂರು ರಸ್ತೆಯಲ್ಲಿರುವ ಹೆಬ್ಬಗೋಡಿ ಬಳಿ ಗುಂಪನ್ನು ಚದುರಿಸಲು ಪೊಲೀಸರು ಅಶ್ರುವಾಯು ಸಿಡಿಸಿದ್ದಾರೆ. ಇನ್ನು ಉದ್ರಿಕ್ತರು ನಾಲ್ಕೈದು ಬಿಎಂಟಿಸಿ ಬಸ್ ಗಳ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ. ಬಸ್ ಕಿಟಕಿ ಗಾಜುಗಳು ಹೊಡೆದು ಹೋಗಿವೆ.