ಈ ವಜ್ರವನ್ನು ಪಡೆಯಬೇಕೆಂದು ಹಂಬಲಿಸಿ ಅದನ್ನು ವಶವಿರಿಸಿಕೊಂಡಿದ್ದ ರಾಜವಂಶಗಳು ತಕ್ಷಣವೇ ವಿನಾಶವಾಗಿವೆ. ಇನ್ನು ಬ್ರಿಟಿಷರ ಬಗ್ಗೆ ಹೇಳುವುದಾದರೆ, ಅವರು ಈ ವಜ್ರವನ್ನು ಪಡೆದುಕೊಂಡ ಕೂಡಲೇ ತಮ್ಮ ಕಾಲನಿಗಳನ್ನು ಅವರು ಕಳೆದುಕೊಂಡಿದ್ದಾರೆ. ಸೂರ್ಯ ಮುಳುಗದೇ ಇದ್ದ ಸಾಮ್ರಾಜ್ಯವನ್ನು ಹೊಂದಿದ್ದೇವೆ ಎಂದು ಬೀಗುತ್ತಿದ್ದ ಬ್ರಿಟಿಷರು, ಕೊಹಿನ್ನೂರ್ ಸಿಕ್ಕಿದ ಮೇಲೆ ಸೂರ್ಯ ಉದಯವಾಗುವ ನಾಡನ್ನು ನೋಡಿಯೇ ಇಲ್ಲ.