ಕೆಲವು ಕಾರಣಗಳಿಂದ ಯಡಿಯೂರಪ್ಪ ವಿರುದ್ಧದ ಕೇಸ್ ಗಳು ಹೈಕೋರ್ಟ್ ನಲ್ಲಿ ರದ್ದಾಗಿದ್ದವು. ಆದರೆ ಈಗ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಈ ಸಂಬಂಧ ಕಾನೂನು ಪ್ರಕ್ರಿಯೆಗಾಗಿ ವಕೀಲ ಜೋಸೆಫ್ ಅರಿಸ್ಟಾಟಲ್ ಅವರನ್ನು ನೇಮಕ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ. ಅಲ್ಲದೆ ಬಿಎಸ್ ವೈ ಪ್ರಕರಣಗಳ ವಿರುದ್ಧ ಮೇಲ್ಮನವಿ ಸಲ್ಲಿಸುವಂತೆ ಲೋಕಾಯುಕ್ತ ಸಹ ಶಿಫಾರಸು ಮಾಡಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ ಎಂದಿದ್ದಾರೆ.