ಜಾಹೀರಾತು ವಿಭಾಗದ ಅವ್ಯವಸ್ಥೆ, ಜಾಹೀರಾತು ತೆರಿಗೆ ಸಂಗ್ರಹದ ವೈಫಲ್ಯದ ಬಗ್ಗೆ ಕೆ.ಮಥಾಯಿ ಅವರು 5 ವರದಿಗಳನ್ನು ನೀಡಿದ್ದರು. ತೆರಿಗೆ ಸಂಗ್ರಹ ವೈಫಲ್ಯದಿಂದ 2000 ಸಾವಿರ ಕೋಟಿ ನಷ್ಟ ಉಂಟಾಗಿದೆ ಎಂದು ಅವರು ವರದಿಯಲ್ಲಿ ಹೇಳಿದ್ದರು. ಅಲ್ಲದೆ ಬಿಬಿಎಂಪಿಯ ಜಾಹೀರಾತು, ಕಂದಾಯ ವಿಭಾಗದ ಅಧಿಕಾರಿಗಳು, ನೌಕರರು, ಹಿರಿಯ ಅಧಿಕಾರಿಗಳ ಅಡಳಿತ ವೈಫಲ್ಯವೇ ಈ ನಷ್ಟಕ್ಕೆ ಕಾರಣ ಎಂದು ವರದಿಯಲ್ಲಿ ಹೇಳಿದ್ದರು. ಈ ಜಾಹೀರಾತು ಹಗರಣದ ಬಗ್ಗೆ ಸಿಬಿಐ ಅಥವ ಸಿಐಡಿ ತನಿಖೆಯಾಗಬೇಕು ಎಂದು ಶಿಫಾರಸು ಮಾಡಿದ್ದರು.