ನೀವು ಹಾಗೂ ಸಂಪುಟದ ಇನ್ನಿತರ ಸಹೋದ್ಯೋಗಿಗಳ ತಂಡ ಮೈಸೂರು ವಿಭಾಗದಲ್ಲಿ ಬರ ಪ್ರವಾಸ ಕೈಗೊಂಡು, ಅಲ್ಲಿನ ಪರಿಸ್ಥಿತಿ ಏನಿದೆ ಎನ್ನುವುದನ್ನು ಅರಿತಿದ್ದೀರಿ. ಹಾಗೇಯೇ ಮಂಡ್ಯದಲ್ಲಿಯೂ ಅಧ್ಯಯನ ನಡೆಸಿ ವಾಸ್ತವ ಸ್ಥಿತಿ ಏನೆನ್ನುವುದನ್ನು ಅರಿತುಕೊಂಡಿದ್ದೀರಿ. ಜಿಲ್ಲೆಯ ಹಲವು ಹಳ್ಳಿಗಳಿಗೆ ಖುದ್ದು ತೆರಳಿ ಅಲ್ಲಿನ ಜನತೆ ಕುಡಿಯುವ ನೀರಿಗಾಗಿ ಎಷ್ಟು ಕಷ್ಟ ಅನುಭವಿಸುತ್ತಿದೆ ಎನ್ನುವುದನ್ನು, ಜಾನುವಾರುಗಳು ನೀರಿಗಾಗಿ ಎಷ್ಟು ಪರದಾಡುತ್ತಿವೆ ಎನ್ನುವುದನ್ನು ಮನಗಂಡಿರುತ್ತೀರಿ. ಕಾರಣ ಕೂಡಲೇ ಕಾರ್ಯೋನ್ಮುಖರಾಗಿ ನೆನೆಗುದಿಗೆ ಬಿದ್ದಿರುವ ನೀರಿನ ಯೋಜನೆಗಳನ್ನು ತಕ್ಷಣ ಪೂರ್ಣಗೊಳಿಸಿ. ಆತಗೂರು ಹಾಗೂ ಬಾಣೋಜಿಪಂತ್ ಏತ ನೀರಾವರಿ ಯೋಜನೆಯ ಪಂಪ್ಗಳನ್ನು ಬದಲಾಯಿಸಿ ಕೆರೆಗಳನ್ನು ತುಂಬಿಸುವ ಕಾರ್ಯಕ್ಕೆ ಮುಂದಾಗುವಂತೆ ಮಾಜಿ ಸಿಎಂ ಮನವಿ ಮಾಡಿದ್ದಾರೆ.