ಬೆಂಗಳೂರು: ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಅವರು ಪಾಕಿಸ್ತಾನ ನರಕ ಅಲ್ಲ. ಅಲ್ಲಿನ ಜನ ತುಂಬಾ ಒಳ್ಳೆಯವರು ಎಂಬ ಹೇಳಿಕೆಗೆ ನಟ ಜಗ್ಗೇಶ್ ಎಂಟಾಣೆ ಅಕ್ಷರ ಕಲಿಯದ, ಅನುಭವ ಇಲ್ಲದವರೆಲ್ಲ ಪಾಕಿಸ್ತಾನವನ್ನು ಹೊಗಳುತ್ತಾರೆ ಎಂದು ಟಾಂಗ್ ನೀಡಿದ್ದಾರೆ.
ಎಬಿವಿಪಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಜಗ್ಗೇಶ್ ಮಾತನಾಡಿ ಶತ್ರು ದೇಶವನ್ನು ರಮ್ಯಾ ಹೊಗಳಿದ್ದು ನಮ್ಮೊಳಗೆ ಬೆಂಕಿ ಉರಿಯುವಂತೆ ಮಾಡಿದೆ. ಕೇವಲ ಮತ ಬ್ಯಾಂಕ್ ಗಾಗಿ ದೇಶ ವಿರೋಧಿ ಹೇಳಿಕೆ ನೀಡಬೇಡಿ. ನಿಮ್ಮಂತವರ ಅವಶ್ಯಕತೆ ಭಾರತಕ್ಕಿಲ್ಲ ಎಂದು ಕಿಡಿಕಾರಿದ್ದಾರೆ.
ಪಾಕಿಸ್ತಾನಕ್ಕೆ ಹೋಗುವುದು, ನರಕಕ್ಕೆ ಹೋಗುವುದು ಎರಡೂ ಒಂದೇ ಎಂದು ಹೇಳಿದ್ದ ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರಿಗೆ ಟಾಂಗ್ ನೀಡುವ ಭರದಲ್ಲಿ ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಅವರು, ಪಾಕಿಸ್ತಾನ ನರಕ ಅಲ್ಲ. ಅಲ್ಲಿನ ಜನ ತುಂಬಾ ಒಳ್ಳೆಯವರು ಎಂದು ಹೊಗಳಿದ್ದರು.
Advertisement