ನವದೆಹಲಿ: ಮಾನಹಾನಿ ಪ್ರಕರಣಗಳನ್ನು ಸ್ವಂತಕ್ಕೆ ದುರ್ಬಳಿಕೆ ಮಾಡಿಕೊಳ್ಳುತ್ತಿದ್ದಾರೆ ಎಂಬ ಆರೋಪದ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಜೆ ಜಯಲಲಿತಾ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ ಸುಪ್ರೀಂ ಕೋರ್ಟ್, ಸಾರ್ವಜನಿಕ ವ್ಯಕ್ತಿಯಾಗಿ ಟೀಕೆಗಳನ್ನು ಎದುರಿಸಲು ಕಲಿಯಿರಿ ಎಂದು ಬುಧವಾರ ಹೇಳಿದ್ದು, ಎಲ್ಲ ಸಮಯದಲ್ಲೂ ಮಾನಹಾನಿ ಪ್ರಕರಣಗಳನ್ನು ದಾಖಲಿಯುವುದು ಸರಿಯಲ್ಲ ಎಂದಿದೆ.