ಮನ್ ಕಿ ಬಾತ್: ಶೌಚಾಲಯಕ್ಕಾಗಿ ಉಪವಾಸ ಕೈಗೊಂಡಿದ್ದ ರಾಜ್ಯದ ಮಲ್ಲಮ್ಮ ಬಗ್ಗೆ ಮೋದಿ ಪ್ರಶಂಸೆ

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮನ್ ಕಿ ಬಾತ್ ನಲ್ಲಿ ಕರ್ನಾಟಕ ಮೂಲದ ವಿದ್ಯಾರ್ಥಿನಿ ಬಗ್ಗೆ ಪ್ರಶಂಸಿಯ ಮಾತುಗಳನ್ನಾಡಿದ್ದಾರೆ...
ಮಲ್ಲಮ್ಮ-ನರೇಂದ್ರ ಮೋದಿ
ಮಲ್ಲಮ್ಮ-ನರೇಂದ್ರ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮನ್ ಕಿ ಬಾತ್ ನಲ್ಲಿ ಕರ್ನಾಟಕ ಮೂಲದ ವಿದ್ಯಾರ್ಥಿನಿ ಬಗ್ಗೆ ಪ್ರಶಂಸಿಯ ಮಾತುಗಳನ್ನಾಡಿದ್ದಾರೆ.

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಢಾಣಾಪುರ ಗ್ರಾಮದ ವಿದ್ಯಾರ್ಥಿನಿ ಮಲ್ಲಮ್ಮ ಪೋಷಕರ ವಿರೋಧದ ನಡುವೆಯೂ ಉಪವಾಸ ಮಾಡಿ ಶೌಚಾಲಯ ನಿರ್ಮಿಸಿಕೊಂಡಿರುವುದು ಪ್ರಶಂಸನಿಯ. ಮಲ್ಲಮ್ಮನ ಈ ಕಾರ್ಯ ಹಾಗೂ ಗ್ರಾಮಸ್ಥರ ಬಗ್ಗೆ ಮೋದಿ ಹೊಗಳಿದ್ದಾರೆ.

16 ವರ್ಷದ ಮಲ್ಲಮ್ಮ ಮನೆಯಲ್ಲಿ ಶೌಚಾಲಯ ನಿರ್ಮಿಸುವಂತೆ ಒತ್ತಾಯಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಳು. ಇದನ್ನು ತಿಳಿದ ಗ್ರಾಮದ ಮುಖಂಡರು 8 ಸಾವಿರ ರುಪಾಯಿ ವೆಚ್ಚದಲ್ಲಿ 7 ದಿನಗಳಲ್ಲಿ ಶೌಚಾಲಯ ನಿರ್ಮಿಸಿಕೊಟ್ಟಿದ್ದರು. ಇದೇ ವಿಚಾರವನ್ನು ಮೋದಿ ತಮ್ಮ ಮನ್ ಕಿ ಬಾತ್ ನಲ್ಲಿ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com