ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜೇಟ್ಲಿ, ಬೋನಸ್ ತಿದ್ದುಪಡಿ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲಾಗುವುದು ಎಂದು ತಿಳಿಸಿದರು. ಈ ವೇಳೆ ಕೇಂದ್ರ ಕಾರ್ಮಿಕ ಸಚಿವ ಬಂಡಾರು ದತ್ತಾತ್ರೇಯ ಹಾಗೂ ಇಂಧನ ಪಿಯುಶ್ ಗೋಯಲ್ ಸಹ ಹಾಜರಿದ್ದರು. ಈ ಮೂಲಕ ಸೆಪ್ಟೆಂಬರ್ 02ರ ದೇಶವ್ಯಾಪ್ತಿ ಮುಷ್ಕರದ ಬಿಸಿ ಶಮನಗೊಳಿಸಲು ಕೇಂದ್ರ ಸರ್ಕಾರ ಯೋಜಿಸಿದೆ.