ಒಟ್ಟಾರೆ ಹೇಳುವುದಾದರೆ ಒಡಲೊಳಗೆ ಅಸಮಾನತೆಯ ಆಯಾಮವನ್ನು ಇಟ್ಟುಕೊಂಡು ಹಸುಗೂಸುಗಳಲ್ಲಿ ವ್ಯತ್ಯಾಸ ಮಾಡುವ ಅವೈಜ್ಞಾನಿಕ ಪದ್ಧತಿಯನ್ನು ರದ್ದುಮಾಡಿ ಮೂಲಭೂತ ಬದಲಾವಣೆಗಳನ್ನು ತರಬೇಕು. ಸಮಾನ ಶಿಕ್ಷಣ ನೀತಿಗಾಗಿ ಒಂದು ಆಂದೋಲನವೇ ನಡೆಯಬೇಕು. ಶಿಕ್ಷಕರು, ವಿದ್ಯಾರ್ಥಿಗಳು ಸಾಹಿತಿಗಳು, ಸಾಮಾಜಿಕ ಚಿಂತಕರು, ವಿವಿಧ ಸಂಘಟನೆಗಳ ಚಳವಳಿಗಾರರು ಒಂದಾಗಿ ಈ ಚಳವಳಿಯನ್ನು ಮುನ್ನಡೆಸಬೇಕು ಸಾಹಿತ್ಯ ಪರಿಷತ್ತು ಪ್ರೇರಕ ಶಕ್ತಿಯಾಗಬೇಕು. ಈ ದಿಕ್ಕಿನಲ್ಲಿ ಮುಂದಿನ ಅಂಶಗಳನ್ನು ಗಮನಿಸಬೇಕು ಎಂದರು.