ಇದೇ ವೇಳೆ ಭ್ರಷ್ಟಾಚಾರದ ವಿರುದ್ಧ ಗುಡುಗಿದ ಪ್ರಧಾನಿ ಮೋದಿ ಅವರು, ನಾವು ಭ್ರಷ್ಟರ ಎಲ್ಲಾ ದಾರಿಗಳನ್ನು ಬಂದ್ ಮಾಡಿಯೇ ತೀರುತ್ತೇವೆ. ನೋಟ್ ನಿಷೇಧದ ನಂತರ ಭ್ರಷ್ಟರು ಜನ್ ಧನ್ ಖಾತೆಯನ್ನು ದುರ್ಬಳಕೆ ಮಾಡಿಕೊಳ್ಳಲು ಯತ್ನಿಸುತ್ತಿದ್ದು, ಒಂದು ವೇಳೆ ದುರ್ಬಳಕೆ ಮಾಡಿಕೊಂಡರೆ ಅವರಿಗೆ ಶಿಕ್ಷೆ ಖಚಿತ ಎಂದರು. ಅಲ್ಲದೆ ಜನ್ ಧನ್ ಖಾತೆ ದುರ್ಬಳಕೆ ಮಾಡಿಕೊಳ್ಳಲು ಭ್ರಷ್ಟರಿಗೆ ಅವಕಾಶ ನೀಡಬಾರದು ಎಂದು ಕರೆ ನೀಡಿದರು.