ಇಚ್ಚೀಚಿಗಷ್ಟೇ ತಮಿಳುನಾಡು ಮುಖ್ಯಮಂತ್ರಿಯ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಮಾತನಾಡುತ್ತಿದ್ದಾರೆ ಎಂದು ಅಪೋಲೊ ಆಸ್ಪತ್ರೆಯ ಅಧ್ಯಕ್ಷ ಡಾ. ಪ್ರತಾಪ್ ಸಿ.ರೆಡ್ಡಿ ಅವರು ಹೇಳಿದ್ದರು. ಆದರೆ ನಿನ್ನೆ ಸಂಜೆ ಹೃದಯಾಘಾತಕ್ಕೆ ಒಳಗಾಗಿದ್ದರಿಂದ ಅವರ ಸ್ಥಿತಿ ಮತ್ತಷ್ಟು ಚಿಂತಾಜನಕವಾಗಿದ್ದು, ಇಂದು ಬೆಳಗ್ಗೆಯಿಂದ ಇಸಿಎಂಒ ಉಪಕರಣದ ನೆರವಿನ ಮೂಲಕ ಆಮ್ಲಜನಕವನ್ನು ಪೂರೈಸಲಾಗುತ್ತಿದೆ.