ಈ ಹಿಂದೆ ತಮ್ಮ ವಿರುದ್ಧದ ರಾಸಲೀಲೆ ಸಿಡಿ ಬಿಡುಗಡೆಯಾದರೆ, ತಾನು ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡುವುದಾಗಿ ಮೇಟಿ ಹೇಳಿದ್ದರು. ಅದರಂತೆ ಈಗ ಸಿಡಿ ಬಿಡುಗಡೆಯಾಗುತ್ತಿದ್ದಂತೆ ಮೇಟಿ ಅವರು ರಾಜಿನಾಮೆ ಪತ್ರದೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ತೆರಳಿ, ಚರ್ಚೆ ನಡೆಸಿದ್ದಾರೆ. ಈ ವೇಳೆ ಸಿಎಂ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡುವಂತೆ ಮೇಟಿ ಅವರಿಗೆ ಸೂಚಿಸಿದ್ದು, ಸಿಎಂ ಸೂಚನೆಯಂತೆ ರಾಜಿನಾಮೆ ನೀಡಿದ್ದಾರೆ.