ಇಂದು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕಿರ್ಗಿಸ್ತಾನ ಅಧ್ಯಕ್ಷ ಅಲ್ಮಾಜ್ಬೆಕ್ ಅತಂಬಾಯೆವ್ ಅವರು ದ್ವಿಪಕ್ಷೀಯ ಮಾತುಕತೆ ನಡೆಸಿದ್ದು, ಸುಸ್ಥಿರ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಗೆ ಒತ್ತು ನೀಡುವುದರ ಜೊತೆಗೆ ರಕ್ಷಣೆ, ಆರೋಗ್ಯ, ಐಟಿ, ಪ್ರವಾಸೋದ್ಯಮ, ಕೃಷಿ, ಗಣಿಗಾರಿಕೆ ಮತ್ತು ಇಂಧನ ಕ್ಷೇತ್ರಗಳಲ್ಲಿ ಪರಸ್ಪರ ಸಹಕಾರ ವರ್ಧನೆಗೆ ಉಭಯ ದೇಶಗಳ ನಾಯಕರು ಒಪ್ಪಿಕೊಂಡಿರುವುದಾಗಿ ವಿದೇಶಾಂಗ ಸಚಿವಾಲಯದ ವಕ್ತಾರ ವಿಕಾಸ್ ಸ್ವರೂಪ್ ಅವರು ಟ್ವೀಟ್ ಮಾಡಿದ್ದಾರೆ.