ಇಂದು ವಿಜಯವಾಡದಲ್ಲಿ ತೆಲುಗು ದೇಶಂ ಪಕ್ಷದ ಕಾರ್ಯಕ್ರಮದಲ್ಲಿ ಮಾತನಾಡಿದ ಚಂದ್ರಬಾಬು ನಾಯ್ಡು ಅವರು, ನೋಟ್ ನಿಷೇಧದಿಂದಾಗಿ ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ವಿವರಿಸಿದರು. ಕೇಂದ್ರ ಈ ನಿರ್ಧಾರದಿಂದಾಗಿ ಜನರ ಆದಾಯ ಕಡಿಮೆಯಾಗಿದೆ ಮತ್ತು ಸರ್ಕಾರ ಸಹ ಸೂಕ್ತ ರೀತಿಯಲ್ಲಿ ಹಣ ಒದಗಿಸಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ.