ಬೆಂಗಳೂರು: ಕನ್ನಡ ಸಾಹಿತಿ ಬೊಳುವಾರು ಮಹಮ್ಮದ್ ಕುಂಞಿ ಅವರಿಗೆ ೨೦೧೬ ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಬುಧವಾರ ಕೇಂದ್ರ ಸಾಹಿತ್ಯ ಅಕಾಡೆಮಿ ಬಿಡುಗಡೆ ಮಾಡಿರುವ ಪತ್ರಿಕಾ ಹೇಳಿಕೆಯಲ್ಲಿ ಬೊಳುವಾರು ಮಹಮ್ಮದ್ ಕುಂಞಿ ಅವರ ಸ್ವಾತಂತ್ರ್ಯದ ಓಟ ಕಾದಂಬರಿಗೆ ಈ ಪ್ರಶಸ್ತಿ ನೀಡಲಾಗಿದೆ.
ಒಂದು ಲಕ್ಷ ರೂ ನಗದು ಮತ್ತು ಪ್ರಶಸ್ತಿ ಫಲಕ ಹೊಂದಿರುವ ಅಕಾಡೆಮಿ ಪ್ರಶಸ್ತಿಯನ್ನು ೨೦೧೭ ಫೆಬ್ರವರಿಯಲ್ಲಿ ಪ್ರಧಾನ ಮಾಡಲಾಗುತ್ತದೆ. ಕಳೆದ ವರ್ಷ ಕೆ ವಿ ತಿರುಮಲೇಶ್ ಅವರ ಅಕ್ಷರ ಕಾವ್ಯ ಕವನಸಂಕಲನಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.
ಕನ್ನಡ ವಿಭಾಗಗ ಆಯ್ಕೆ ಸಮಿತಿಯಲ್ಲಿ ಹಿರಿಯ ಸಾಹಿತಿಗಳಾದ ಡಾ. ಎಚ್ ಸಿ ಬೋರಲಿಂಗಯ್ಯ, ಎಲ್ ಹನುಮಂತಯ್ಯ ಮತ್ತು ಎಸ್ ಜಿ ಸಿದ್ಧರಾಮಯ್ಯನವರು ಇದ್ದದ್ದನ್ನು ಕೂಡ ಪತ್ರಿಕಾ ಹೇಳಿಕೆ ತಿಳಿಸಿದೆ.