ಇಂದು ನಡೆದ ಪಕ್ಷದ ಸಾಮಾನ್ಯ ಮಂಡಳಿ ಸಭೆಯಲ್ಲಿ ಶಶಿಕಲಾ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಿದ ಕೆಲವು ಗಂಟೆಗಳ ನಂತರ ಸಭೆಯಲ್ಲಿ ಪಕ್ಷ ಪಾಸ್ ಮಾಡಿದ ನಿಲುವಳಿ ಪ್ರತಿಯನ್ನು ಪನ್ನೀರ್ ಸೆಲ್ವಂ ಅವರು ಜಯಲಲಿತಾ ಅವರ ಪೋಯಸ್ ಗಾರ್ಡನ್ ನಿವಾಸಕ್ಕೆ ತೆರಳಿ ಶಶಿಕಲಾ ಅವರಿಗೆ ನೀಡಿದರು. ಬಳಿಕ ಮಾತನಾಡಿದ ಸಿಎಂ, ಪಕ್ಷದ ಪ್ರಧಾನ ಕಾರ್ಯದರ್ಶಿ ಹುದ್ದೆ ವಹಿಸಿಕೊಳ್ಳಲು ಶಶಿಕಲಾ ಒಪ್ಪಿಕೊಂಡಿದ್ದಾರೆ ಎಂದರು.