ಅಪಘಾತ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಆಕ್ರೋಶ ವ್ಯಕ್ತಪಡಿಸುವ ಭರದಲ್ಲಿ ಮಾನವೀಯತೆ ಮರೆತ ಕೆಲ ಸಾರ್ಜವನಿಕರು ವಿದೇಶಿ ಮಹಿಳೆಯ ಬಟ್ಟೆ ಬಿಚ್ಚಿ, ಮನಸೋ ಇಚ್ಛೆ ಥಳಿಸಿದ್ದಾರೆ. ಈ ಘಟನೆ ಬೆಂಗಳೂರಿನ ಸೋಲದೇವನಹಳ್ಳಿ ಬಳಿ ನಡೆದಿತ್ತು. ಈ ಸಂಬಂಧ ಪೊಲೀಸರು ದೂರು ಸ್ವೀಕರಿಸದೆ ನಿರ್ಲಕ್ಷ ಮಾಡಿದ್ದಾರೆಂದು ವಿದ್ಯಾರ್ಥಿನಿಯು ಪೊಲೀಸ್ ಉನ್ನತಾಧಿಕಾರಿಗಳಿಗೆ ಮತ್ತು ತಾಂಜೇನಿಯಾ ರಾಯಭಾರ ಕಚೇರಿ ಮೂಲಕ ಕೇಂದ್ರ ಸರ್ಕಾರಕ್ಕೂ ದೂರು ನೀಡಿದ್ದಳು.