ನೆಲಮಂಗಲ: ತೈಲ ಕಾರ್ಖಾನೆಯಲ್ಲಿ ಅಗ್ನಿ ಅವಘಡ, 50ಕ್ಕೂ ಹೆಚ್ಚು ಕಾರ್ಮಿಕರು ಸಿಲುಕಿರುವ ಶಂಕೆ

ನೆಲಮಂಗಲದ ಮಲ್ಲಬಾನವಾಡಿ ಗ್ರಾಮದ ಸಮೀಪ ಆಲಿವ್ ಆಯಿಲ್ ಕಾರ್ಖಾನೆಯಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು, 50ಕ್ಕೂ ಹೆಚ್ಚು ಕಾರ್ಮಿಕರು ಸಿಲುಕಿರುವ...
ಅಗ್ನಿ ಅವಘಡ(ಸಾಂದರ್ಭಿಕ ಚಿತ್ರ)
ಅಗ್ನಿ ಅವಘಡ(ಸಾಂದರ್ಭಿಕ ಚಿತ್ರ)

ಬೆಂಗಳೂರು: ನೆಲಮಂಗಲದ ಮಲ್ಲಬಾನವಾಡಿ ಗ್ರಾಮದ ಸಮೀಪ ಆಲಿವ್ ಆಯಿಲ್ ಕಾರ್ಖಾನೆಯಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು, 50ಕ್ಕೂ ಹೆಚ್ಚು ಕಾರ್ಮಿಕರು ಸಿಲುಕಿರುವ ಸಾಧ್ಯತೆ ಇದೆ.

ಸುಮಾರು 150 ಮಂದಿ ಕೆಲಸ ಮಾಡುತ್ತಿರುವ ಬೃಹತ್ ಕಾರ್ಖಾನೆಯಾಗಿದ್ದು, ಕಾರ್ಖಾನೆಯಲ್ಲಿ ಭಾರೀ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಹಲವು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ.

ಕಾರ್ಖಾನೆ ಒಳಗೆ ಇರುವ ಸಿಲಿಂಡರ್ ಗಳು ಒಂದೊಂದಾಗಿಯೇ ಸ್ಫೋಟಗೊಳ್ಳುತ್ತಿದ್ದು, ಇದರಿಂದಾಗಿ ಕಾರ್ಖಾನೆ ಹೊತ್ತಿ ಉರಿಯುತ್ತಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com