ಸಿಯಾಚಿನ್ ನಲ್ಲಿ ಫೆ.3 ರಂದು ಸಂಭವಿಸಿದ ಭೀಕರ ಹಿಮಪಾತಕ್ಕೆ ಭಾರತದ 10 ಯೋಧರು ಮೃತಪಟ್ಟಿದ್ದರು. ಮೃತಪಟ್ಟವರಲ್ಲಿ ಮೂವರು ಕರ್ನಾಟಕದ ಯೋಧರಾಗಿದ್ದು, ಮೂವರಲ್ಲಿ ಹನುಮಂತಪ್ಪ ಕೊಪ್ಪದ್ ಅವರ ಪಾರ್ಥಿವ ಶರೀರವನ್ನು ರಾಜ್ಯಕ್ಕೆ ತಂದು ಅಂತ್ಯಕ್ರಿಯೆ ನೆರವೇರಿಸಲಾಗಿದೆ. ಇದೀಗ ನಾಗೇಶ್ ಹಾಗೂ ಮಹೇಶ್ ಅವರ ಮೃತದೇಹಗಳು ಪತ್ತೆಯಾಗಿದ್ದು, ಶೀಘ್ರದಲ್ಲೇ ಈ ಇಬ್ಬರು ಯೋಧರ ಪಾರ್ಥಿವ ಶರೀರವನ್ನು ರಾಜ್ಯಕ್ಕೆ ತರುವ ಪ್ರಯತ್ನಗಳು ನಡೆಯುತ್ತಿದೆ.